Tuesday, August 4, 2026
Tuesday, August 4, 2026

ರೈಲ್ವೆ  ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದ ಬಿ. ವೈ. ರಾಘವೇಂದ್ರ

Date:

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನೂತನ ರೈಲ್ವೆ ಸಂಪರ್ಕ ಕಲ್ಪಿಸಲು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಅವಿರತ ಪ್ರಯತ್ನವನ್ನು ನೆಡೆಸಿದ್ದರು.

ಈ ಸಂಬಂಧ ರಾಣಿಬೆನ್ನೂರು- ಶಿಕಾರಿಪುರ ರೈಲ್ವೆ ಮಾರ್ಗವನ್ನು ಕೇಂದ್ರದ ರೈಲ್ವೆ ಅಧಿಕಾರಿಗಳು ತಂಡವು ಮಂಗಳವಾರ
– ರಾಣಿಬೆನ್ನೂರಿನಿಂದ ಶಿಕಾರಿಪುರ – ಶಿವಮೊಗ್ಗವರೆಗೆ ನೂತನ ಮಾರ್ಗದಲ್ಲಿ ಆಗಮಿಸಿ ಪರಿಶೀಲಿಸಿ ಈ ಯೋಜನೆಗೆ ಬೇಕಾದ ಮಾಹಿತಿ, ಭೂ ಸ್ವಾಧೀನ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಸಂಸದರ ಅಧ್ಯಕ್ಷತೆಯಲ್ಲಿ ಸಭೆ ನೆಡೆಸಿ ದೀರ್ಘ ಸಮಾಲೋಚನೆ ಮಾಡಿ ಶೀಘ್ರವಾಗಿ ಸಮಸ್ಯೆ ಪರಿಹರಿಸಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಲು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ವಿಷಯವಾಗಿ ಡಿಸೆಂಬರ್ ಕೊನೆಯ ವಾರ ಅಥವಾ ಜನವರಿಯಲ್ಲಿ ಮೊದಲನೇ ಹಂತದ ಕಾಮಗಾರಿಯನ್ನ ಪ್ರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶಿವಮೊಗ್ಗದ ಸೊಗನೆಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ತಾಂತ್ರಿಕ ವಿಷಯಗಳ ಬಗ್ಗೆ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ನೆಡೆಸಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳಾದ ಹರಿ ಬಾಬು. IRSE. ಜೆನರಲ್ ಮ್ಯಾನೇಜರ್.ಎಂ. ಜಿ. ಸುದೀಪ್. ಸೀನಿಯರ್ ಡಿ. ಜಿ. ಎಂ.ಶ್ರೀನಿವಾಸ್. ಜೆ. ಜಿ. ಎಂ, ಎಂ. ರಾಜು ಆಡಿಷನಲ್ ಜೆನರಲ್ ಮ್ಯಾನೇಜರ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...