Monday, August 10, 2026
Monday, August 10, 2026

ವಿಜಯೇಂದ್ರ ತನ್ನಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ – ಸಂಸದ ಬಿ.ವೈ ರಾಘವೇಂದ್ರ

Date:

ವಿಜಯೇಂದ್ರ ತನ್ನಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ – ಸಂಸದ ಬಿ.ವೈ ರಾಘವೇಂದ್ರ

ವಿಜಯೇಂದ್ರ ಜನಪ್ರತಿನಿಧಿಯಾಗಿ ಗುರುತಿಸಿಕೊಳ್ಳದೇ ತನ್ನ ಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ ಎಂದು ಸಂಸದ ಹಾಗೂ ವಿಜಯೇಂದ್ರ ಅಣ್ಣನಾಗಿರುವ ಬಿ ವೈ ರಾಘವೇಂದ್ರ ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ವಿಜಯೇಂದ್ರ ಅವರಿಗೆ ಸ್ಥಾನಮಾನ ಕೊಡುವ ಬಗ್ಗೆ ಚರ್ಚೆಯಾಗುತ್ತಿರುವ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು. ಯಡಿಯೂರಪ್ಪನವರಾಗಿರಲಿ, ವಿಜಯೇಂದ್ರ ಆಗಲಿ ಎಲ್ಲಿಯೂ ಈ ಕುರಿತು ಹೇಳಿಕೊಂಡಿಲ್ಲ. ಅಪೇಕ್ಷೇನೂ ಪಟ್ಟಿಲ್ಲ, ವಿಜಯೇಂದ್ರ ಅವನ ಪಾಡಿಗೆ ಅವನು ಸಂಘಟನೆಯಲ್ಲಿ ಸಂಘಟನೆಯ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇನ್ನೂ ನಿನ್ನೆ ಶಿರಸಿಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರ ಕುರಿತು ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡಿ ಮೂರು ಬಾರಿ ಸಂಸತ್​​ ಸದಸ್ಯನಾಗಿ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿದ್ದಾರೆ.

ಹಾಗಾಗಿ, ಆ ದಿಕ್ಕಿನಲ್ಲಿಯೇ ಮುಂದುವರಿಯುವ ಅಪೇಕ್ಷೆ ಇದೆ ಎಂದರು. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಎಂಟು ತಾಲೂಕಿಗೆ ಸೇವೆ ಮಾಡುವ ಅವಕಾಶ ಹಾಗೂ ಆಶೀರ್ವಾದ ಜನ ಮಾಡಿದ್ದಾರೆ. ಹಾಗಾಗಿ, ನಾನು ಲೋಕಸಭಾ ಸದಸ್ಯನಾಗಿಯೇ ಸೇವೆ ಮುಂದುವರಿಸಿಕೊಂಡು ಹೋಗುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಉಮೇಶ ಮನೆಯ ಮೇಲಿನ ಐಟಿ ದಾಳಿಯ ಕುರಿತು ಮಾತನಾಡಿದ ಸಂಸದ ರಾಘವೇಂದ್ರ ಅವರು, ಐಟಿ ದಾಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ. ಉಮೇಶ್ ಅವರು ಅನೇಕ ವರ್ಷಗಳಿಂದ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ತನಿಖೆ ನಡೆಯುತ್ತಿದೆ, ಐಟಿ ಅಧಿಕಾರಿಗಳು ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...