Friday, June 19, 2026
Friday, June 19, 2026

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕಾನೂನು ರೂಪಿಸಲು ಆಗ್ರಹ

Date:

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕಾನೂನು ರೂಪಿಸಲು ಆಗ್ರಹಿಸಿ ಮೂರುವರೆ ಸಾವಿರ ಕಿಲೋಮೀಟರ್ ಸೈಕಲ್ ಜಾಥ -ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ 3500 ಕಿ.ಮಿಟರ್ ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ 31 ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡುತ್ತಿರುವ ಬೆಂಗಳೂರಿನ ಕಿರಣ್ ಎಂಬ ಯುವಕ ಈಗಾಗಲೇ 19 ಜಿಲ್ಲೆಗಳಿಗೆ ಎರಡೂವರೆ ಸಾವಿರ ಕಿಲೋಮೀಟರ್ ಏಕಾಂಗಿ ಸೈಕಲ್ ಜಾಥ ಮೂಲಕ ಹೋಗಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಇಂದು ಬೆಳಗ್ಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು ಹೋರಾಟಗಾರ ಯುವಕನನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ಆತ್ಮೀಯವಾಗಿ ಬರಮಾಡಿಕೊಂಡು ಹೋರಾಟಕ್ಕೆ ಯುವ ಕಾಂಗ್ರೆಸ್ ನಿಂದ ಸಂಪೂರ್ಣವಾಗಿ ಬೆಂಬಲಿಸಿ ಮಹಾವೀರ ವೃತ್ತದಲ್ಲಿ ಪ್ರತಿಭಟಿಸಿ ನಂತರ ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ನಡಿಗೆ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ,ಬಿ.ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ .ಕುಮರೇಶ್ , ಜಿಲ್ಲಾ ಕಾಂಗ್ರೆಸ್ ನ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್ , INTCU ಜಿಲ್ಲಾಧ್ಯಕ್ಷ ಬಿ ಅರ್ಜುನ್ , INTCU ವಿದ್ಯಾರ್ಥಿ ಘಟಕದ ಅಧ್ಯಕ್ಷ ನಿಹಾಲ್ ಸಿಂಗ್, ಯುವ ಕಾಂಗ್ರೆಸ್ನ ಅರುಣ್ ನವುಲೆ ವೆಂಕಟೇಶ್ ಕಲ್ಲೂರು , ಪವನ್, ರಾಹುಲ್ ಸೀಗೆಹಟ್ಟಿ , ಮಧು, ದರ್ಶನ್ ರಾಹುಲ್ ಮಹಿಳಾ ಕಾಂಗ್ರೆಸ್ ನ ಗೀತಾ ಹಾಗೂ ಕಾರ್ಯಕರ್ತರು ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

“ಕರ್ತವ್ಯ ಆ್ಯಪ್ ” ನಲ್ಲಿ ಶೇ. 70.6 ಕ್ಕೂ ಹೆಚ್ಚು ನೌಕರರ ನೋಂದಾವಣೆ. ಸರ್ಕಾರದ ಸ್ಪಷ್ಠಿಕರಣ

"ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ" ಎಂಬ ಕೆಲವು ಮಾಧ್ಯಮಗಳ...

S.N.Channabasappa ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಬಂಧನಕ್ಕೆ ಶಾಸಕ ಎಸ್.ಎನ್‌.ಚನ್ನಬಸಪ್ಪಆಗ್ರಹಿಸಿ ಪತ್ರ

S.N.Channabasappaಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದಲ್ಲಿ ನಟ ಪ್ರಕಾಶ್ ರಾಜ್...