Tuesday, October 1, 2024
Tuesday, October 1, 2024

ತಪ್ಪುಗಳನ್ನು ಎತ್ತಿ ತೋರಿಸುವ ಮಾಧ್ಯಮಗಳನ್ನು ಗೌರವಿಸಿ – ಬಿ.ಎಸ್.‌ ವೈ

Date:

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳು ಸಮಾಜದ ಕುಂದುಕೊರತೆಗಳ ಮೇಲೆ ಬೆಳಕು ಚಲ್ಲುತ್ತಿದೆ.ಸಮಾಜದಲ್ಲಿನ ಆಗುಹೋಗುಗಳನ್ನು ಆಳುವವರಿಗೆ ತಿಳಿಸುವ ಕೆಲಸಗಳನ್ನು ಪತ್ರಿಕಾರಂಗ ಮಾಡುತ್ತಿವೆ ಎಂದರು.

ನಮ್ಮ ತಪ್ಪುಗಳನ್ನು ಎತ್ತಿತೋರಿಸುವ ಮಾದ್ಯಮಗಳನ್ನು‌ ನಾವು ಗೌರವದಿಂದ‌‌ ಕಾಣಬೇಕು ಎಂದ ಅವರು ಪತ್ರಿಕೆಗಳಿಗೆ ಓದುಗರು ನಿಜವಾದ ಮಾಲೀಕರು. ವೃತ್ತಿ ಹಿರಿಮೆ ಕಾಪಾಡಿಕೊಳ್ಳಲು ಪತ್ರಕರ್ತರು ಹೆಚ್ಚಿನ ಗಮನಕೊಡಬೇಕು ಎಂದರು.

ಗೃಹ ಸಚಿವ ಆರಗ ಜ್ಙಾನೇಂದ್ರ ಮಾತನಾಡಿ, ಸಂವಹನ ‌ಮಾನವನ ಜೀವನದಲ್ಲಿ ಅವಶ್ಯಕತೆ ಇದೆ ಎಂದರು.

ದೃಷ್ಯ ಮಾದ್ಯಮಗಳ ವೈಭವೀಕರಣದಿಂದ ಮುದ್ರಣ ಮಾಧ್ಯಮ ನೇಪತ್ಯಕ್ಕೆ ಸರಿಯುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ‌ ಮುದ್ರಣ ಮಾಧ್ಯಮ ತನ್ನ ಓದುಗರನ್ನು ಹೆಚ್ಚಿಸಿಕೊಂಡಿರುವುದು ಶ್ಲಾಘನೀಯ ಎಂದರು.

ನಕಲಿ‌ ಪತ್ರಕರ್ತರ ನಡುವೆ ಅಸಲಿ ಪತ್ರಕರ್ತರು ಗುರುತಿಸಿಕೊಳ್ಳುವುದು ಕಷ್ಟವಾಗಿದೆ. ನಮ್ಮ ಸರ್ಕಾರ ಪತ್ರಕರ್ತರಿಗೆ ಸಾಕಷ್ಟು ಸೌಲಭ್ಯ ನೀಡಿದೆ ಎಂದರು.

ಹೆಚ್.ಎಸ್ ದೊರೆಸ್ವಾಮಿ ಪ್ರಶಸ್ತಿ ಪುರಸ್ಕೃತ ಪ್ರಜಾವಾಣಿಯ ಹಿರಿಯ ಪತ್ರಕರ್ತ ಹನೀಫ್ ಮಾತನಾಡಿ, ಕೋವಿಡ್ ನಂತಹ ಸಂಕಷ್ಟದ‌ ಸಮಯದಲ್ಲಿ ಪತ್ರಕರ್ತರ ನೆರವಿಗೆ ಬಂದಿರುವ ರಾಜ್ಯ ಕಾರ್ಯ ನಿರತ ಪತ್ರಕರ್ತರದ ಕಾರ್ಯ ಶ್ಲಾಘನೀಯ ಎಂದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಿದರು. ಸಮಾರಂಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ರಾಜ್ಯ ಆರ್ಯ ವೈಶ್ಯ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್ ಆರುಣ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಕುಮಾರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ರವಿಕುಮಾರ್, ಮಾದ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಯಡಗೆರೆ ಮತ್ತಿತರರು ಇದ್ದರು.

ವಾರ್ಷಿಕ ದತ್ತಿ ಪ್ರಶಸ್ತಿ ಪಡೆದವರು
ಡಿವಿಜಿ ಪ್ರಶಸ್ತಿಯನ್ನು ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಸಂಪಾದಕರಾದ ರವಿ ಹೆಗಡೆ ಅವರಿಗೆ, ಎಚ್. ಎಸ್.ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ ಹನೀಫ್, ಪ್ರಜಾವಾಣಿ, ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಸ್. ಎನ್.ಅಶೋಕಕುಮಾರ್, ಸಂಪಾದಕರು,ಗೊಮ್ಮಟವಾಣಿ. ಪಾಟೀಲ್ ಪುಟ್ಟಪ್ಪ ಪ್ರಶಸ್ತಿ : ಎಸ್.ಕೆ.ಶೇಷಚಂದ್ರಿಕ, ಹಿರಿಯ ಪತ್ರಕರ್ತರು, ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು , ಪಿ.ಆರ್.ರಾಮಯ್ಯಪ್ರಶಸ್ತಿ: ಯು.ಎಸ್. ಶೆಣೈ, ಸಂಪಾದಕರು, ಕುಂದಪ್ರಭ, ಗರುಡನಗಿರಿ ನಾಗರಾಜ್ ಪ್ರಶಸ್ತಿ: ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ  ಮಂದಾರ, ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ :ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು, ಕಿಡಿ ಶೇಷಪ್ಪ ಪ್ರಶಸ್ತಿ: ಕೆ.ಎಂ. ರೇಖಾ, ಸಂಪಾದಕರು, ಹೊಸಪೇಟೆಟೈಮ್ಸ್,ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ,ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೋ ಮುಖ್ಯಸ್ಥೆ, ಪ್ರಜಾವಾಣಿ, ಹುಬ್ಬಳ್ಳಿ ,ಎಂ. ನಾಗೇಂದ್ರರಾವ್ ಪ್ರಶಸ್ತಿ : ಎನ್.ಡಿ.ಶಾಂತಕುಮಾರ್ ವಿಜಯವಾಣಿ, ಶಿವಮೊಗ್ಗ, ಮಿಂಚು ಶ್ರೀನಿವಾಸ್ ಪ್ರಶಸ್ತಿ: ರಾಮಸ್ವಾಮಿ ಹುಲಕೋಡು, ವಿಜಯಕರ್ನಾಟಕ ,ಹೆಚ್.ಎಸ್ ರಂಗಸ್ವಾಮಿ ಪ್ರಶಸ್ತಿ : ಪಿ.ಸುನೀಲ್ ಕುಮಾರ್ ಸಂಪಾದಕರು ‘ಸಿಟಿ ಹೈಲೈಟ್ಸ್’ ಬೆಂಗಳೂರು
ಸಂಘದ ವಿಶೇಷ ಪ್ರಶಸ್ತಿಗಳು:
ಪ್ರಹ್ಲಾದಗುಡಿ, ವರದಿಗಾರರು, ಕನ್ನಡ ಪ್ರಭ, ರಾಯಚೂರು, ಮುನಿವೆಂಕಟೇಗೌಡ, ಹಿರಿಯ ಪತ್ರಕರ್ತರು ಕೋಲಾರ ,ಪ್ರಕಾಶ್ ರಾಮಜೋಗಿಹಳ್ಳಿ, ವಾರ್ತಾಭಾರತಿ, ಬೆಂಗಳೂರು,ಎಂ.ಕೆ. ರಾಘವೇಂದ್ರ ಮೇಗರವಳ್ಳಿ ವಿಜಯ ಕರ್ನಾಟಕದ ತೀರ್ಥಹಳ್ಳಿ ಇವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಪ್ರಶಸ್ತಿ ಪ್ರಧಾನ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...