Monday, August 17, 2026
Monday, August 17, 2026

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

Date:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 324 ಪ್ರೊಬೆಷನರಿ ಅಧಿಕಾರಿ ( PO) ಹುದ್ದೆಗಳ ನೇಮಕಾತಿ ಸೇರಿದಂತೆ 6,328 ಹುದ್ದೆಗಳಿವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಅರ್ಜಿಯಲ್ಲಿ ಬದಲಾವಣೆ ಮಾಡಲು ಅಕ್ಟೋಬರ್ 25 ರವರೆಗೆ ಕಾಲಾವಕಾಶ ನೀಡಲಾಗಿದೆ.

ಪರಿಶಿಷ್ಟ ಜಾತಿ (SC ) 162
ಇತರೆ ಹಿಂದುಳಿದ ವರ್ಗಗಳಿಗೆ ( ‌OBC) 560
ಆರ್ಥಿಕವಾಗಿ ದುರ್ಬಲ ವಿಭಾಗ (EWS ) ‌‌200
ಸಾಮಾನ್ಯ ವರ್ಗಕ್ಕೆ 810 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು. ತಮ್ಮ ಪದವಿಯ ಅಂತಿಮ ವರ್ಷ ಅಥವಾ ಸೆಮಿಸ್ಟರ್ ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂಬುದಕ್ಕೆ ಪುರಾವೆಯನ್ನು ಹಾಜರುಪಡಿಸಬೇಕಾಗುತ್ತದೆ ಎಂಬ ಷರತ್ತಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದು.
ಇಂಟಿಗ್ರೇಟೆಡ್ ಡುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಉತ್ತಿರ್ಣ ಗೊಳಿಸಿರುವ ದಿನಾಂಕ ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಇರಬೇಕು ಎಂಬುದನ್ನು ಗಮನಿಸಬೇಕು.

ವಯೋಮಿತಿ

ಅಭ್ಯರ್ಥಿಯು ಏಪ್ರಿಲ್ 1, 2021 ರಂತೆ 21 ವರ್ಷಕ್ಕಿಂತ ಕಡಿಮೆ ಇರಬಾರದು.
30 ವರ್ಷಗಳಿಗಿಂತ ಮೇಲ್ಪಟ್ಟವರಾಗಿರಬಾರದು.
ಎಸ್ಸಿ, ಎಸ್ಟಿ, ಓಬಿಸಿ, ಪಿಡಬ್ಲ್ಯೂಡಿ, ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆಯನ್ನು ಪ್ರಿಲಿಮ್ಸ್, ಮೈನ್ಸ್, ಮತ್ತು ಸಂದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಫೀಲಿಮ್ಸ್ ನಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಗೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು www.sbi.co.in ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ಅಧಿಸೂಚನೆ ಸಂಬಂಧಿಸಿದಂತೆ ವಿವರವನ್ನು ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...