Friday, March 20, 2026
Friday, March 20, 2026

ಅಕ್ಕನ ಸಾಧನೆಯ ಬಗ್ಗೆ ತಮ್ಮನ ಪ್ರೀತಿಯ ಬರಹ

Date:

ಸಾಧನೆಯ ಹಾದಿಯಲ್ಲಿರುವ ಮಹಿಳೆಯ ಯಶಸ್ಸಿನ ಬಗ್ಗೆ ಕುಟುಂಬದ ಸದಸ್ಯರು ಬರೆಯುವುದು ಸಾಮಾನ್ಯದ ಸಂಗತಿ.
ಆದರೆ ಎಲ್ಲಾ ಮಮಕಾರಗಳನ್ನು ಮೀರಿ ಅಕ್ಕನ ಸಾಧನೆಯ ಮೆಟ್ಟಿಲುಗಳನ್ನು ಮನತುಂಬಿ ರಂಗೋಲಿ ಇಟ್ಟಂತೆ ಬಿಡಿಸಿಟ್ಟಿದ್ದಾರೆ ಸಹೋದರ ರಾಮಚಂದ್ರ ನಾಡಿಗ್.
ಬೆಳಗಾವಿಯ ಮರಾಠಾ ಲೋಕಮಾನ್ಯ ಸೊಸೈಟಿಯವರು ನವರಾತ್ರಿ ಅಂಗವಾಗಿ ನೀಡುವ ‘ಸ್ತ್ರೀಶಕ್ತಿ’ ಪ್ರಶಸ್ತಿಯನ್ನು ಈಬಾರಿ ನನ್ನ ಅಕ್ಕ ವತ್ಸಲಾ ಇವಳಿಗೆ ನೀಡಿದ್ದಾರೆ.
ಅಕ್ಕನ ಸಾಧನೆಯ ಪಯಣವನ್ನು ರಾಮಚಂದ್ರ ನಾಡಿಗ್‌ ಅವರು ತಮ್ಮದೇ ಆದ ಶೈಲಿಯಲ್ಲಿ ವಿವರಿಸಿರುವ ಬಗೆ ಹೀಗಿದೆ……,
ಉದ್ಯಮದಲ್ಲಿ ಯಾವ ಮಹಿಳೆ ತನ್ನನ್ನು ತೊಡಗಿಸಿಕೊಂಡು ಯಶಸ್ವಿ ಆಗಿರುತ್ತರೋ, ಸಾಧನೆ ಮಾಡಿರುತ್ತಾರೆಯೋ ಅವರಿಗೆ ಲೋಕಮಾನ್ಯ ಸೊಸೈಟಿಯು ಈ ಪ್ರಶಸ್ತಿಯನ್ನು ನೀಡುತ್ತದೆ.
ನನ್ನ ನಾಲ್ಕು ಜನ ಅಕ್ಕಂದಿರಲ್ಲಿ ವತ್ಸಲಾ ನಾಲ್ಕನೆಯವಳು. ಓದಿನಲ್ಲಿ ಸ್ವಲ್ಪ ಹಿಂದೆ ಇದ್ದರೂ, ವ್ಯವಹಾರದ ಲಕ್ಷಣಗಳು ಮೊದಲಿನಿಂದಲೇ ಇದ್ದವು.


ಟೈಪ್ ರೈಟಿಂಗ್ ಕಲಿತಳು, ಭರತನಾಟ್ಯ ಕಲಿತಳು ಯಾವುದೂ ಕೈಹಿಡಿಯಲಿಲ್ಲ.
ಈಕೆ ಒಳ್ಳೆ ನೃತ್ಯಗಾತಿ. ಅದನ್ನೇ ಮುಂದುವರಿಸಿದ್ದರೆ ನೃತ್ಯದಲ್ಲಿ ಒಳ್ಳೆಯ ಭವಿಷ್ಯವಿತ್ತು. ಆದರೆ ಮನೆಯಲ್ಲಿನ ಹಲವು ಸಮಸ್ಯೆಗಳು ಇದಕ್ಕೆ ಆಸ್ಪದ ಕೊಡಲಿಲ್ಲ.
ಕೆಲ ವರ್ಷಗಳ ಕಾಲ ಹಳ್ಳಿಯ ಮನೆಯಲ್ಲಿ ಕುಳಿತು ಬಟ್ಟೆ ಹೊಲಿದು ಅದರಲ್ಲೆ ಉತ್ತಮ ಹಣ ಸಂಪಾದಿಸುತ್ತಿದ್ದಳು.
ಕಡೆಗೆ ಬೆಳಗಾವಿಯ ವಿಲಾಸ್ ತಿನೈಕರ್ ಜೊತೆ ಮದುವೆಯಾಯಿತು. ಭಾವ ವಿಲಾಸ್ ಅವರ ಬಗ್ಗೆ ಹಾಗೂ ಅವರ ಉದ್ಯಮದ ಬಗ್ಗೆ ನಮಗೆ ಏನೂ ಗೊತ್ತಿರಲಿಲ್ಲ.
ಆಗ ನಮ್ಮ ಭಾವ ನಡೆಸುತ್ತ ಇದ್ದದ್ದು ಸಣ್ಣ ಹೋಟೆಲ್. ಬೆಳಗಾವಿಯ ಭಾಗ್ಯನಗರದಲ್ಲಿನ ಕೆ. ಎಲ್.ಇ ಸೊಸೈಟಿಯ ಹಾಸ್ಟೆಲ್ನಲ್ಲಿ ಹೋಟೆಲ್ ನಡೆಸುತ್ತಿದ್ದರು.
ವಿಲಾಸ್ ಈ ಹೋಟೆಲ್ ಜೊತೆ ಮತ್ತೊಂದು ಹೋಟೆಲ್ ಉದ್ಯಮಕ್ಕೆ ಕೈ ಹಾಕಿದರು. ವತ್ಸಲಾ ಇಲ್ಲಿನ ವ್ಯವಹಾರ ನೋಡಿಕೊಂಡರೆ, ಭಾವ ಮತ್ತೊಂದು ಹೋಟೆಲ್ ವ್ಯವಹಾರ ನೋಡಿಕೊಳ್ಳುತ್ತಿದ್ದರು.
ಕಡೆಗೆ ಒಮ್ಮೆ ಇದ್ದಬದ್ದ ಬಂಗಾರವನ್ನೆಲ್ಲ ಮಾರಿ, ಬ್ಯಾಂಕಿನಿಂದ ಒಂದಿಷ್ಟು ಲೋನ್ ಮಾಡಿ ಭಾಗ್ಯನಗರದಲ್ಲಿ ಒಂದು ಮಳಿಗೆಯನ್ನು ಖರೀದಿ ಮಾಡಿದರು. ಅದಕ್ಕೆ “ಪದ್ಮಶ್ರೀ ಹೋಟೆಲ್” ಎಂದು ನಾಮಕರಣ ಮಾಡಿದರು.
ಎರಡರ ಜೊತೆ ಮೂರನೆಯದಾಗಿ ಈ ಹೋಟೆಲ್ ಆರಂಭವಾಯಿತು.
ಅವೆರಡು ಕಾಲೇಜ್ ಕ್ಯಾಂಟೀನ್ ಆದರೆ, ಇದು ಮಾತ್ರ ಯಾರ ಆಧೀನದಲ್ಲೂ ಇಲ್ಲದೆ ಸ್ವತಂತ್ರವಾಗಿ ನಡೆಯುವಂತಾಯಿತು. ಪದ್ಮಶ್ರೀ ಹೋಟೆಲ್ನಲ್ಲಿ ಎರಡು ಹೊತ್ತು ಊಟ ಮಾತ್ರ.
ಕಡೆಗೆ ಎರಡು ಹಾಸ್ಟೆಲ್ ಕ್ಯಾಂಟೀನ್ ಗಳನ್ನು ಬಿಟ್ಟು ಪದ್ಮಶ್ರೀ ಹೋಟೆಲ್ ಸಮೀಪವೇ ಮತ್ತೊಂದು ಜಾಗವನ್ನು ಲೀಸ್ ಗೆ ಪಡೆದು ಎರಡು ವರ್ಷದ ಹಿಂದೆ ಮತ್ತೊಂದು ಹೋಟೆಲ್ ಆರಂಭವಾಗಿದೆ.
ಇಲ್ಲಿ ಊಟ ಇಲ್ಲ ತಿಂಡಿ ಮಾತ್ರ. ಇದರ ನಡುವೆ ಮದುವೆ, ಬರ್ತಡೆ ಪಾರ್ಟಿ ಮತ್ತಿತರ ಶುಭಕಾರ್ಯಗಳಿಗೆ ಕ್ಯಾಟರಿಂಗ್ ಸೇವೆ ಕೂಡಾ ಇದೆ. ಭಾವನವರ ಎಲ್ಲಾ ಸಾಧನೆ ಹಿಂದೆ ಇರುವುದು ಅಕ್ಕ ವತ್ಸಲಾ.
ಹಬ್ಬ-ಹರಿದಿನಗಳಲ್ಲಿ ಊಟದಲ್ಲಿ ಏನಾದರೂ ವಿಶೇಷತೆ, ಅಡುಗೆ, ತಿಂಡಿಯಲ್ಲಿ ಏನಾದರೂ ವಿಶೇಷತೆ ಹೀಗೆ ಹಲವು ಹೊಸ ಪ್ರಯೋಗಗಳನ್ನು ಮಾಡಿ ಗ್ರಾಹಕರ ಮೆಚ್ಚುಗೆಗೆ ಪದ್ಮಶ್ರೀ ಹೋಟೆಲ್ ಪಾತ್ರವಾಗಿದೆ ಎಂದರೆ ಅದಕ್ಕೆ ಕಾರಣ ವತ್ಸಲಾ.
ತವರು ಮನೆಯಲ್ಲಿ ನಮ್ಮಮ್ಮ ಮಾಡುತ್ತಿದ್ದ ಚಟ್ನಿ, ಪಲ್ಯಗಳನ್ನು ಹೋಟೆಲ್ ನಲ್ಲಿ ಪ್ರಯೋಗಿಸಿದ್ದು ಗ್ರಾಹಕರಿಗೆ ಬಹಳ ಇಷ್ಟವಾಗಿದೆ.
ಅದಕ್ಕೆ ಹಿರಿಯರು ಹೇಳಿದ ಮಾತು… ಹೆಣ್ಣು ಸಂಸಾರದ ಕಣ್ಣು.
ಶ್ರೀಮತಿ ವತ್ಸಲಾ ಅವರು ಇನ್ನೂ ಹೆಚ್ಚಿನದನ್ನು ಸಾಧಿಸಲಿ ….
ಶುಭಾಶಯಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...