Sunday, April 19, 2026
Sunday, April 19, 2026

ಚಂಪಕ ಸರಸ್ಸುಗೆ ಚಂದದ ರೂಪಕೊಟ್ಟ ಯಶೋಮಾರ್ಗ

Date:

ಕೆಳದಿ ಅರಸ ವೆಂಕಟಪ್ಪ ನಾಯಕರು ಚಂಪಕ ಎಂಬ ಪ್ರೇಯಸಿ ಸವಿ ನೆನಪಿಗಾಗಿ ನಿರ್ಮಿಸಿದ ಕೊಳ ಅದೆ ಇಂದಿನ ಚಂಪಕ ಸರಸ್ಸು. ಈ ಕೊಳ ಬಿರು ಬೇಸಿಗೆಯಲ್ಲಿ ತುಂಬಿ ತುಳುಕುತ್ತಿರುತ್ತದೆ. ಆನಂದಪುರಂ ಸನಿಹದಲ್ಲಿರುವ ಈ ಕೊಳ ಎತ್ತರದ ಪ್ರದೇಶದಲ್ಲಿದೆ.
ಈ ಕೊಳವು ಕಲ್ಯಾಣಿಯ ವಿನ್ಯಾಸದಲ್ಲಿದ್ದು, ಈ ಕೊಳಕ್ಕೆ ಚಂಪಕ ಸರಸ್ಸು ಅಲ್ಲದೆ ಮಹಂತೇಶ್ವರ ಮಠ, ಮಹಾಂತ ಮಠ, ಮಹಾಂತ ಮಠದ ಕೊಳ ಎಂದು ಜನಜನಿತವಾಗಿದೆ.
ಇತ್ತೀಚಿಗೆ ಈ ಕೊಳವನ್ನು ನಟ ಯಶ್ ಅವರ ನೇತೃತ್ವದಲ್ಲಿ ಯಶೋಮಾರ್ಗ ಸಂಸ್ಥೆಯ ವತಿಯಿಂದ ಸ್ವಚ್ಛ ಗೊಳಿಸುವ ಪುನರುಜ್ಜೀವನ ಯೋಜನೆ ಕೈಗೊಂಡಿದೆ. ಕೊಳದ ಮಧ್ಯದಲ್ಲಿ ಸುಂದರವಾದ ನಂದಿಮಂಟಪ, ಆ ಮಂಟಪ ತಲುಪಲು ಶಿಲಾ ಸೇತುವೆ ಇದ್ದು, ಇದು ಐತಿಹಾಸಿಕ ಹಿನ್ನೆಲೆಯುಳ್ಳ ಪ್ರವಾಸಿ ಆಕರ್ಷಣೆಯ ತಾಣವಾಗಿದೆ.
ಇಂತಹ ಸುಂದರ ಕೊಳವನ್ನು ಯಶೋಮಾರ್ಗ ಸಂಸ್ಥೆಯ ಹೈದರಾಬಾದ್ ನ ಫ್ರೀಡಂ ಆಯಿಲ್ ಅಸೋಸಿಯೇಷನ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ. ಚಂಪಕ ಸರಸ್ಸು ಅಭಿವೃದ್ಧಿಗೆ ಜಲ ತಜ್ಞ ಶಿವಾನಂದ ಕಳವೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಹಿಂದೆ ಕೆರೆಗಳ ಅಭಿವೃದ್ಧಿ ಕುರಿತು ಅವರೊಂದಿಗೆ ಚರ್ಚಿಸಿದಾಗ, ನಟ ಯಶ್ ರವರಿಗೆ ಚಂಪಕ ಸರಸ್ಸು ಕೊಳದ ಬಗ್ಗೆ ಪ್ರಸ್ತಾಪಿಸಿದ್ದೆವು. ಈಗ ಅವರ ಅಭಿಮಾನಿಗಳ ಮೂಲಕ ಇದನ್ನು ಅಭಿವೃದ್ದಿ ಪಡಿಸಿರುವುದು ಸಂತಸದ ವಿಚಾರ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...