Thursday, September 17, 2026
Thursday, September 17, 2026

ಉತ್ತರಾಖಂಡ್ ನಲ್ಲಿ ವರುಣನ ಆರ್ಭಟ

Date:

ಉತ್ತರಾಖಂಡದಲ್ಲಿ ವರುಣನ ಆರ್ಭಟದಿಂದ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ. ಉತ್ತರಾಖಂಡ್ ಸರ್ಕಾರವು ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಮಳೆಯಿಂದಾಗಿ ಉತ್ತರಾಖಂಡ್ ನ ನೈನಿತಾಲ್, ಅಲ್ಮೋರಾ, ಚಂಪಾವತ್, ಪಿಥೋರಘರ್, ಉಧಮ್ ಸಿಂಗ್ ನಗರ, ಲಾಲ್ಕೂವಾನ್ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮೂಲಕ ಈವರೆಗೂ 300ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗಿದೆ. ಉತ್ತರಾಖಂಡ್ ನ ಪ್ರವಾಸಿ ತಾಣವಾದ ನೈನಿತಾಲ್ ಸೇರಿದಂತೆ ಇತರೆ ಭಾಗಗಳಲ್ಲಿ ಭೂಕುಸಿತದಿಂದಾಗಿ ಗಿರಿಧಾಮಕ್ಕೆ ಹೋಗುವ ಮೂರು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕಗಳಲ್ಲಿ ವ್ಯತ್ಯಯ ಉಂಟಾಗಿದೆ.
ವರುಣನ ಅವಾಂತರದಿಂದ ಸೇತುವೆಗಳು ರೈಲ್ವೆ ಹಳಿಗಳು ಹಾನಿಗೊಳಗಾಗಿದ್ದು, ಇದನ್ನು ಸರಿಪಡಿಸಲು 4 ದಿನಗಳು ಬೇಕಾಗಬಹುದು ಎಂದು ರೈಲ್ವೆ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...