Thursday, March 19, 2026
Thursday, March 19, 2026

ತಾಲಿಬಾನ್: ಮಗು ಚಿವುಟಿ, ತೊಟ್ಟಿಲು ತೂಗುವ ತಂತ್ರ

Date:

ಇತ್ತೀಚಿಗೆ ಆಫಘಾನಿಸ್ತಾನದ ಆಂತರಿಕ ಯುದ್ಧದಲ್ಲಿ ಸಾವಿಗೀಡಾದ ಸಂಬಂಧಿಕರಿಗೆ ನಿವೇಶನ ನೀಡುವುದಾಗಿ ಅಲ್ಲಿನ ಪ್ರಸ್ತುತ ತಾಲಿಬಾನ್ ಸರ್ಕಾರದ ಒಳಾಡಳಿತದ ಮಂತ್ರಿ ಸಿರಾಜುದ್ದೀನ್ ಹಕ್ಕಾನಿ ಹೇಳಿದ್ದಾರೆ.

ಕಾಬುಲ್ ಹೋಟೆಲ್ನಲ್ಲಿ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾವಿಗೀಡಾದವರ ಸಂಬಂಧಿಗಳ ಪ್ರತಿ ಕುಟುಂಬಕ್ಕೆ ಒಂದು ನಿವೇಶನ ಮತ್ತು 10 ಸಾವಿರ ಆಫಘಾನಿಸ್ (112 USG) ಹಣ ಪರಿಹಾರ ನೀಡಿದೆ. ಈ ಕ್ರಮದ ಮೂಲಕ ಜಗತ್ತಿಗೆ ತನ್ನ ಪ್ರಜಾ ಪ್ರೀತಿಯನ್ನ ತೋರಿಸಿದೆ. ತನ್ನವರನ್ನೇ ಅಮಾನುಷವಾಗಿ ಮಾರಣಹೋಮಗೈದ ಅಲ್ಲಿನ ತಾಲಿಬಾನಿಗಳ ಈ ನಾಟಕ ಕಣ್ಣೊರೆಸುವ ತಂತ್ರವಾಗಿದೆ ಎನ್ನದೇ ವಿಧಿಯಿಲ್ಲ.

ಈಗಾಗಲೇ ಅಮೆರಿಕ ನಿರೀಕ್ಷಿಸಿದಂತೆ ಆಫಘಾನಿಸ್ತಾನದ ಇಡಿ ಜನಸಂಖ್ಯೆಯು ಬಡತನಕ್ಕೆ ಜಾರಿ ಬೀಳುವ ಸಂದರ್ಭವಿದೆ. ಈ ಅಭಿಪ್ರಾಯದ ವಿರುದ್ಧ ಇಡೀ ಜಗತ್ತನ್ನು ನೆರವಿಗಾಗಿ ತನ್ನತ್ತ ಸೆಳೆಯುವ ಪ್ರಯತ್ನ ಇದಾಗಿದೆ. ಈ ಪರಿಹಾರ ಘೋಷಣೆ ಮಾಡಿರುವುದು ತಾಲಿಬಾನಿಗಳ ಸರ್ಕಾರದಲ್ಲಿ ಆಂತರಿಕವಾಗಿ ಭಿನ್ನಾಭಿಪ್ರಾಯಕ್ಕೂ ಕಾರಣವಾಗಿದೆ.

ಅಮೇರಿಕಾದ ಬಾಂಬ್ ದಾಳಿಯಲ್ಲಿ ಸಾವಿಗೀಡಾದ ತನ್ನ ಸೈನಿಕರ ಹುತಾತ್ಮರು ಎಂದು ಕರೆದುಕೊಂಡಿದೆ.ಮಹಿಳೆಯರು ಮತ್ತು ಮಕ್ಕಳನ್ನು ಅಮಾನವೀಯವಾಗಿ ನಡೆಸಿಕೊಂಡ ತಾಲಿಬಾನ್ ಸರ್ಕಾರ ಇನ್ನೂ ಏನೇನು ನಾಟಕವಾಡುತ್ತದೋ ಗೊತ್ತಿಲ್ಲ. ಒಟ್ಟಿನಲ್ಲಿ ಈ ಪರಿಹಾರ ಘೋಷಣೆ ಜಗತ್ತಿನ ಇತರ ದೇಶಗಳನ್ನ ಹುಬ್ಬೇರಿಸುವಂತೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...