Monday, February 2, 2026
Monday, February 2, 2026

ರಾಮಾಯಣ ಭಾರತೀಯ ಸಂಸ್ಕೃತಿಯ ಪ್ರತೀಕ : ಡಾ. ಶಿವಾನಂದ ಕೆಳಗಿನಮನಿ

Date:

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ರಾಜಕಾರಣದ ಕೈಪಿಡಿ ಎಂದು ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಶಿವಾನಂದ ಕೆಳಗಿನಮನಿ ಹೇಳಿದ್ದಾರೆ.

ಶಿವಮೊಗ್ಗದ ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು
ರಾಮಾಯಣ ವಾಲ್ಮೀಕಿ ಬರೆದ ಅತ್ಯಂತ ಶ್ರೇಷ್ಠ ಕೃತಿಯಾಗಿದೆ. ಜನಜೀವನವನ್ನು ಪವಿತ್ರಗೊಳಿಸಿದೆ. ಕುಟುಂಬಗಳಿಗೆ ಗೌರವ ನೀಡಿದೆ. ಸಂಸ್ಕೃತಿಯ ಪ್ರತೀಕವಾಗಿದೆ. ವಿಶೇಷವಾಗಿ ರಾಜಕೀಯ ತಿಳಿವಳಿಕೆ ನೀಡಿದೆ. ರಾಜಕಾರಣದ ಅತ್ಯಂತ ಸೂಕ್ಷ್ಮ ವಿಷಯಗಳು ಇಡೀ ರಾಮಾಯಣದ ತುಂಬಾ ಅಡಗಿವೆ. ರಾಜಧರ್ಮವನ್ನು ಅದು ಹೇಳುತ್ತದೆ. ರಾಮಾಯಣ ಕೃತಿ ರಾಜಕಾರಣದ ಗೃಹಸ್ಥಾಶ್ರಮವೂ ಆಗಿದೆ. ಹಾಗಾಗಿಯೇ ಇದು ರಾಜಕಾರಣದ ಕೈಪಿಡಿ ಎಂದರು.

ಶ್ರೀರಾಮ ಆದರ್ಶ ಎಂಬ ಭಾವನೆಯನ್ನು ಬೆಳೆಸುತ್ತದೆ. ಇಡೀ ರಾಮಾಯಣದ ಕತೆ ಒಂದು ಸಾಮಾನ್ಯ ಜೀವನದ ನೆಲೆಯನ್ನು ಒದಗಿಸುವುದರ ಜೊತೆಗೆ ದ್ವೇಷವನ್ನು ಅಳಿಸುವ ಮತ್ತು ಕರ್ತವ್ಯದ ಸಂಘರ್ಷವನ್ನು ತಿಳಿಸುವ ಜೊತೆಗೆ ಸಾಹಿತ್ಯವನ್ನು ಗುರುತಿಸುವ ಕೆಲಸವನ್ನು ರಾಮಾಯಣ ಕೃತಿ ಮಾಡುತ್ತದೆ. ಸಾಹಿತ್ಯದ ಮೊದಲ ಸೃಷ್ಠಿಯೇ ರಾಮಾಯಣ ಕೃತಿಯಾಗಿದೆ ಎಂದು ಹೇಳಿದರು.
ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಮಾಯಣ, ಸಂಸ್ಕೃತಿಯ ಪ್ರತೀಕವಾಗಿದೆ. ಶ್ರೀರಾಮ ಒಬ್ಬ ಆದರ್ಶ ಪುರುಷ ಎನ್ನುವುದಕ್ಕೆ ವಾಲ್ಮೀಕಿ ರಾಮಾಯಣದಲ್ಲಿ ಬೇಕಾದಷ್ಟು ಉದಾಹರಣೆಗಳಿವೆ. ಆದರೆ, ಪ್ರಸಕ್ತ ಕೆಲವು ರಾಜಕಾರಣಿಗಳು ಶ್ರೀರಾಮನನ್ನು ಕೇವಲ ರಾಜಕಾರಣಕ್ಕಾಗಿ ಎಳೆದು ತರುತ್ತಿರುವುದು ಅತ್ಯಂತ ದುರಂತವಾಗಿದೆ. ಜಗತ್ತೇ ಶ್ರೀರಾಮ ಹುಟ್ಟಿದ ಜಾಗ ಅಯೋಧ್ಯೆ ಎಂದು ಒಪ್ಪಿಕೊಂಡರೆ ಕೆಲವರು ಮಾತ್ರ ಇದಕ್ಕೆ ಆಧಾರ ಎಲ್ಲಿ ಎಂದು ಕೇಳುತ್ತಾರೆ. ವಾಲ್ಮೀಕಿ ಎಂದರೆ ಚರ್ಚೆಯ ವಸ್ತುವೇ ಅಲ್ಲ, ಎಲ್ಲರೂ ಅವರನ್ನು ಪ್ರೀತಿಸುತ್ತಾರೆ. ಆತ ಸೀಮಿತವಾಗಿಲ್ಲ. ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾರೆ. ರಾಮಾಯಣ ಅದೊಂದು ಪುಸ್ತಕವಲ್ಲ, ಜೀವನ ಧರ್ಮವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಆರ್. ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ಬಿ.ಎಸ್. ನಾಗರಾಜ್, ಪಾಲಿಕೆ ಸದಸ್ಯ ಡಿ. ನಾಗರಾಜ್, ವಿಶ್ವಾಸ್, ವಾಲ್ಮೀಕಿ ಸಮಾಜದ ಪ್ರಮುಖರಾದ ಶಿವಪ್ಪ, ರೂಪಾ ಲಕ್ಷ್ಮಣ್, ಸೀತಾರಾಮ್, ಶಿವಾಜಿ, ಲಕ್ಷ್ಮಣಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮಿಪ್ರಸಾದ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಜಿಪಂ ಸಿಇಒ ಎಂಎಲ್ ವೈಶಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...