Sunday, December 14, 2025
Sunday, December 14, 2025

ನಾಡಿನ ಹಿತ ನೋಡಿ ಮಿಸಲಾತಿ : ಬಸವರಾಜ್ ಬೊಮ್ಮಾಯಿ

Date:

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕೆಂಬ ವಾಲ್ಮೀಕಿ ಸಮುದಾಯದ ಬೇಡಿಕೆಯನ್ನು ನ್ಯಾಯಯುತವಾಗಿ ಒದಗಿಸಲು ಪ್ರಯತ್ನಿಸುತ್ತೇನೆ. ಆದರೆ, ಇದು ಸುಲಭವಲ್ಲ , ಸವಾಲಿನ ಕೆಲಸ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , “ಯಾವ ರೀತಿ ಮೀಸಲಾತಿ ಹೆಚ್ಚಿಸಬಹುದೆಂಬ ಬಗ್ಗೆ ಕಾನೂನು ತಜ್ಞರ ಸಮಿತಿ ರಚಿಸಲಾಗಿದೆ. ನಾಡಿನ ಹಿತ ಮತ್ತು ಜನಾಂಗದ ಹಿತ ಗಮನದಲ್ಲಿ ಇಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ” ಎಂದರು.


ಇದೇ ಸಂದರ್ಭದಲ್ಲಿ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್, ಹಾಗೂ ಟ್ವಿಟರ್, ಯ್ಯೂಟುಬ್ ಚಾನೆಲ್ ಗೆ ಚಾಲನೆ ನೀಡಿದರು.
” ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಯವರಲ್ಲಿ ಬೇಡಿಕೆ ಇಟ್ಟಾಗಿದೆ. ಅವರು ಮೀಸಲಾತಿಯನ್ನು ಹೆಚ್ಚಿಸುತ್ತಾರೆಂಬ ವಿಶ್ವಾಸವೂ ಇದೆ”.ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...