Saturday, December 6, 2025
Saturday, December 6, 2025

ಮಲೆನಾಡಿನ ಅಮೂಲ್ಯ ಸಿರಿ:

Date:

ಶಿವಮೊಗ್ಗ ಲಕ್ಕಿನಕೊಪ್ಪ ಸರ್ಕಲ್ ನಲ್ಲಿರುವ ಒಂದು ಅಪರೂಪ ವಸ್ತು ಸಂಗ್ರಹಾಲಯ, ನಮ್ಮ ಗಮನ ಸೆಳೆಯುತ್ತದೆ ಅದೇ “ಅಮೂಲ್ಯ ಶೋಧ”. ಇದರ ಹಿನ್ನೆಲೆ ಅತ್ಯಂತ ಕುತೂಹಲ. ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ, ಶ್ರೀ.ಹೆಚ್. ಖಂಡೋಬರಾವ್- ಯಶೋಧಮ್ಮರವರ ಪ್ರೇಮ ಸೌಧ. ಶ್ರೀ.ಹೆಚ್. ಖಂಡೋಬರಾವ್ ರವರು ಗತಿಸಿದ ತಮ್ಮ ಪತ್ನಿಯ ಪ್ರೇಮದ ಸಂಕೇತವಾಗಿ ಈ ಸಂಗ್ರಹಾಲಯವನ್ನು ರೂಪುಗೊಳಿಸಿದ್ದಾರೆ. 2008ರಲ್ಲಿ ಆರಂಭವಾದ ಈ ಅಮೂಲ್ಯ ಶೋಧ ಮಲೆನಾಡಿನ, ಅಷ್ಟೇಕೆ ಇಡೀ ನಾಡಿನಾದ್ಯಂತ ಇರುವ ಪುರಾತನ ವಸ್ತುಗಳ ಪ್ರಿಯರನ್ನ ಕೈ ಬೀಸಿ ಕರೆಯುತ್ತಿದೆ. ನಾಣ್ಯ ಸಂಗ್ರಹಕಾರಿಯಾಗಿಯು ಅತ್ಯಂತ ಪ್ರಸಿದ್ಧರಾಗಿರುವ ಖಂಡೋಬರಾವ್ ರವರು ಬಹುಮುಖಿ ಆಸಕ್ತಿಯ ಕೇಂದ್ರವಾದ ಈ ಅಮೂಲ್ಯ ಶೋಧ, ನಮ್ಮ ಮಲೆನಾಡಿನ ಮುಕುಟಕ್ಕೆ ಇಟ್ಟ ಕೀರ್ತಿ ಕಳಸವಾಗಿದೆ. ಇವರ ಈ ಕೊಡುಗೆಯನ್ನ ನಮ್ಮ ಮಲೆನಾಡಿನ ಆಸಕ್ತ ಬಳಗ ಮೆಚ್ಚಿ ಶ್ರೀ. ಹೆಚ್. ಖಂಡೋಬರಾವ್ ರವರಿಗೆ ಹಾರ್ಧಿಕವಾಗಿ, ಸತ್ಕಾರ, ಸನ್ಮಾನ,ಅಭಿಮಾನವನ್ನು ಅರ್ಪಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...