ತಾಳಗುಪ್ಪ: ಇಂದು ಭೂಮಾತೆಯ ಸೀಮಂತ ಹಬ್ಬವಾದ ಭೂಮಿ ಹುಣ್ಣಿಮೆ ಹಬ್ಬವನ್ನು ವಿಜೃಂಬಣೆಯಿಂದ ಆಚರಿಸಲಾಯಿತು. ಹೋಬಳಿಯ ಎಲ್ಲೆಡೆ ರೈತರು ತಮ್ಮ ಜಮೀನಿನಲ್ಲಿ ಫಸಲು ಮೈ ತುಂಬಿದ ಈ ದಿನವನ್ನು ಪೂಜಿಸುವ ಪದ್ದತಿ ಹಿಂದಿನಿಂದಲೂ ನಡೆದು ಬಂದಿದೆ. ಹುಣ್ಣಿಮೆಯ ಈ ದಿನ ಮಲೆನಾಡಿನ ರೈತರು ನಸುಕಿನಲ್ಲಿ ಎದ್ದು ವಿವಿಧ ಎಲೆಗಳ ಸೊಪ್ಪನ್ನು ಬೇಯಿಸಿ ಅದನ್ನು ತಮ್ಮ ಜಮೀನಿನಲ್ಲಿ ಎಲ್ಲೆಡೆ ಹಾಕುತ್ತಾರೆ. ಇದಕ್ಕೆ ಅಚ್ಚು ಬೀರುವುದು ಎನ್ನುತ್ತಾರೆ. ನಂತರ ಜಮೀನಿನಲ್ಲಿ ದೇವರ ಪ್ರತಿಷ್ಠಾಪಿಸಿ ಪೂಜೆ ಮಾಡಿ ಕಡುಬು ನೈವೇದ್ಯ ಮಾಡಿ ಅಲ್ಲಿಯೇ ಊಟ ಮಾಡುವ ಪದ್ದತಿ ಆಚರಿಸುತ್ತಾರೆ. ಕೃಷಿಕ ಹೀರೆಮನೆ ಬಾಲಚಂದ್ರರವರ ತೋಟದಲ್ಲಿ ಭೂ ಹುಣ್ಣಿಮೆಯನ್ನು ಆಚರಿಸಲಾಯಿತು. ನಮಗೆ ಅನ್ನ ನೀಡುತ್ತಿರುವ ಭೂಮಿತಾಯಿಗೆ ಕೃತಜ಼ತೆ ಸಲ್ಲಿಸುವ ಪರಿ ಇದಾಗಿದೆ. ವರದಿ ಕೃಪೆ: ಶ್ರೀ. ರಾಘವೇಂದ್ರ ಶರ್ಮಾ ತಲವಾಟ. ನಿರೂಪಣಾ ಧ್ವನಿ: ರಚನಾ.ಕೆ.ಆರ್
ಮಲೆನಾಡಿನಾದ್ಯಂತ ಸೀಗೆಹುಣ್ಣಿಮೆ ಸಂಭ್ರಮ
Date: