ಹೀರೆಕೆರೂರು, ರಟ್ಟಿಹಳ್ಳಿ ತಾಲೂಕಿನ ತಿಂಗಳಗೊಂದಿ ಗ್ರಾಮದಲ್ಲಿ ಬಸವರಾಜ್ ಎಂಬ ಕೃಷಿಕರ ಬಾಳೆತೋಟವನ್ನು ದುಷ್ಕರ್ಮಿಗಳು ಘಾಸಿಗೊಳಿಸಿದ್ದಾರೆ. ಮಾನ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ, “ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕ್ರೂರ ಮನಸ್ಸು ಉಳ್ಳವರು, ಬೆಳೆಯನ್ನು ನಾಶ ಮಾಡಿರುವುದು ಬೇಸರದ ಸಂಗತಿಯಾಗಿದೆ”. ಈ ವಿಷಯದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದೇನೆ, ಈ ಕೃತ್ಯಕ್ಕೆ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.
ಬೆಳೆ ನಾಶ, ಖೇದಕರ: ಕೃಷಿ ಸಚಿವ ಬಿ.ಸಿ. ಪಾಟೀಲ್
Date: