Sunday, December 14, 2025
Sunday, December 14, 2025

ಗಾಂಜಾ ಸಮಸ್ಯೆ : ಶಾಸಕರ ಪತ್ರ

Date:

ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ಗಾಂಜಾ ಹಾವಳಿ ಹೆಚ್ಚಾಗಿದ್ದು, ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದರಲ್ಲಿ ಬಹುಪಾಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಈ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದ ಎಲ್ಲಾ ಕಡೆಗಳಲ್ಲಿಯೂ ಗಾಂಜಾ ದೊರೆಯುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಶಾಲೆಗಳು ಪ್ರಾರಂಭ ವಾಗದೇ ಇದ್ದುದ್ದರಿಂದ ಶಾಲಾ-ಕಾಲೇಜುಗಳ ಮೈದಾನದಲ್ಲಿ ಗುಂಪು-ಗುಂಪಾಗಿ ಗಾಂಜಾ ಸೇವನೆ ಮತ್ತು ಮಾರಾಟದ ಅವ್ಯಾವಹತವಾಗಿ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರು ದಾಖಲಾಗಿದೆ. ಅಲ್ಲದೆ ಇನ್ನೂ ಅಭಿವೃದ್ಧಿಯಾಗದೇ ಇರುವ ಬಡಾವಣೆಗಳ ಖಾಲಿ ನಿವೇಶನದಲ್ಲಿ ಸಹ ಇದೇ ವಾತಾವರಣ ಕಂಡುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.


ನಗರದ ಕೃಷಿ ಕಾಲೇಜು ಹತ್ತಿರ ಇರುವ ಬಡಾವಣೆಗಳಲ್ಲಿ ಪರಸ್ಥಳದ ವಿದ್ಯಾರ್ಥಿಗಳು ಹಾಗೂ ಯುವಕರು ಬಹು ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡುಬರುತ್ತಿದೆ.
ಗಾಂಜಾ ಸೇವನೆಯ ಮತ್ತಿನಲ್ಲಿ ಯುವಕರ ಗುಂಪು ದಾರಿಹೋಕರ ಮೇಲೆ ಹಲ್ಲೆಗೈಯುತ್ತಿದೆ. ಜನರ ಬಳಿ ಇರುವ ಬೆಲೆಬಾಳುವ ವಸ್ತುಗಳನ್ನು ದೋಚುತ್ತಾರೆ. ಪ್ರತಿಭಟಿಸಿದರೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಾರೆ.ಇಂತಹ ಘಟನೆಗಳು ಪ್ರತಿದಿನ ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ಎಲ್ಲಾ ಗಂಭೀರ ಸಂಗತಿಗಳನ್ನು ವಿಧಾನಪರಿಷತ್ತಿನ ಗೌರವಾನ್ವಿತ ಸದಸ್ಯರಾದ ಶ್ರೀ ಆಯನೂರು ಮಂಜುನಾಥ ಅವರು
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದ ಮೂಲಕ ಗಮನ ಸೆಳೆದಿದ್ದಾರೆ. ಶೀಘ್ರ ಕ್ರಮ ತೆಗೆದುಕೊಳ್ಳಲುವಂತೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...