Sunday, August 2, 2026
Sunday, August 2, 2026

ಗಾಂಜಾ ಸಮಸ್ಯೆ : ಶಾಸಕರ ಪತ್ರ

Date:

ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ಗಾಂಜಾ ಹಾವಳಿ ಹೆಚ್ಚಾಗಿದ್ದು, ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದರಲ್ಲಿ ಬಹುಪಾಲು ಶಾಲಾ-ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಈ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದ ಎಲ್ಲಾ ಕಡೆಗಳಲ್ಲಿಯೂ ಗಾಂಜಾ ದೊರೆಯುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಶಾಲೆಗಳು ಪ್ರಾರಂಭ ವಾಗದೇ ಇದ್ದುದ್ದರಿಂದ ಶಾಲಾ-ಕಾಲೇಜುಗಳ ಮೈದಾನದಲ್ಲಿ ಗುಂಪು-ಗುಂಪಾಗಿ ಗಾಂಜಾ ಸೇವನೆ ಮತ್ತು ಮಾರಾಟದ ಅವ್ಯಾವಹತವಾಗಿ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರು ದಾಖಲಾಗಿದೆ. ಅಲ್ಲದೆ ಇನ್ನೂ ಅಭಿವೃದ್ಧಿಯಾಗದೇ ಇರುವ ಬಡಾವಣೆಗಳ ಖಾಲಿ ನಿವೇಶನದಲ್ಲಿ ಸಹ ಇದೇ ವಾತಾವರಣ ಕಂಡುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.


ನಗರದ ಕೃಷಿ ಕಾಲೇಜು ಹತ್ತಿರ ಇರುವ ಬಡಾವಣೆಗಳಲ್ಲಿ ಪರಸ್ಥಳದ ವಿದ್ಯಾರ್ಥಿಗಳು ಹಾಗೂ ಯುವಕರು ಬಹು ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡುಬರುತ್ತಿದೆ.
ಗಾಂಜಾ ಸೇವನೆಯ ಮತ್ತಿನಲ್ಲಿ ಯುವಕರ ಗುಂಪು ದಾರಿಹೋಕರ ಮೇಲೆ ಹಲ್ಲೆಗೈಯುತ್ತಿದೆ. ಜನರ ಬಳಿ ಇರುವ ಬೆಲೆಬಾಳುವ ವಸ್ತುಗಳನ್ನು ದೋಚುತ್ತಾರೆ. ಪ್ರತಿಭಟಿಸಿದರೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಾರೆ.ಇಂತಹ ಘಟನೆಗಳು ಪ್ರತಿದಿನ ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ಎಲ್ಲಾ ಗಂಭೀರ ಸಂಗತಿಗಳನ್ನು ವಿಧಾನಪರಿಷತ್ತಿನ ಗೌರವಾನ್ವಿತ ಸದಸ್ಯರಾದ ಶ್ರೀ ಆಯನೂರು ಮಂಜುನಾಥ ಅವರು
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದ ಮೂಲಕ ಗಮನ ಸೆಳೆದಿದ್ದಾರೆ. ಶೀಘ್ರ ಕ್ರಮ ತೆಗೆದುಕೊಳ್ಳಲುವಂತೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...