Thursday, June 18, 2026
Thursday, June 18, 2026

ನಮ್ಮ ಶಾಲೆ, ನಮ್ಮ ಕೊಡುಗೆ : ಬಿ.ಸಿ.ನಾಗೇಶ್

Date:

ಸರ್ಕಾರಿ ಶಾಲೆಗಳಲ್ಲಿ ಸುಮಾರು 20 ಸಾವಿರ ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ಶೀಘ್ರವೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ತಿಳಿಸಿದ್ದಾರೆ.
ಬೆಂಗಳೂರು ನಗರದ ಜೆ.ಪಿ.ನಗರ 1ನೇ ಹಂತದಲ್ಲಿ ನಿರ್ಮಿಸಲಾಗಿರುವ ಸಾರಕ್ಕಿ ಅಬ್ಬಯ್ಯ ರೆಡ್ಡಿ ಸ್ಮಾರಕ ಸರ್ಕಾರಿ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು
“ಕೋವಿಡ್ ಬಳಿಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚುತ್ತಿದೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನೂ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತವರು ಯುಪಿಎಸ್ ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ತೋರಿಸಿದ್ದಾರೆ ಎಂದರು.
” ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ತಲಾ ಒಂದು ಮಾದರಿ ಶಾಲೆಗಳನ್ನು ನಿರ್ಮಿಸುವ ಗುರಿ ಇದೆ. ಕೋವಿಡ್ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರಕ್ಕೂ ಸಂಕಷ್ಟ ಎದುರಾಗಿದೆ. ಅದರಿಂದ ಹೊರಬರಲು ” ನಮ್ಮ ಶಾಲೆ, ನಮ್ಮ ಕೊಡುಗೆ ” ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸಲು ಮುಂದಾಗಿದ್ದೇವೆ. ಇದಕ್ಕಾಗಿ ಹೊಸ ಆಪ್ ಕೂಡ ಪರಿಚಯಿಸಲಿದ್ದೇವೆ” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...