Tuesday, October 1, 2024
Tuesday, October 1, 2024

ಮಂಡಗದ್ದೆ ಪಕ್ಷಿಧಾಮಕ್ಕೆ ಮರುಜೀವ

Date:

ಶಿವಮೊಗ್ಗ ಸಮೀಪದ ಮಂಡಗದ್ದೆ, ತುಂಗಾ ನದಿ ತೀರದ ಪಕ್ಷಿಧಾಮ. ಈ ಪ್ರದೇಶವು ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ದೇಶ-ವಿದೇಶದ ವಿವಿಧ ಜಾತಿಯ ಪಕ್ಷಿಗಳ ಸಂತಾನೋತ್ಪತ್ತಿಯ ಸ್ಥಳವಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ತನ್ನ ಅಳಿವಿನಂಚಿನಲ್ಲಿದೆ. ಗಾಜಾನೂರಿನ ತುಂಗಾ ಹಿನ್ನೀರಿನ ಕಾರಣ,ಅಣೆಕಟ್ಟು ಎತ್ತರಿಸಿದ ಪರಿಣಾಮ, ಪಕ್ಷಿಧಾಮ ಪ್ರದೇಶವು ನೀರಿನಲ್ಲಿ ಮುಳುಗಿದೆ.ಹೀಗಾಗಿ ಕಳೆದ ಇಪ್ಪತ್ತು ವರ್ಷಳಿಂದ ಅಳಿವಿನಂಚಿನಲ್ಲಿದೆ.


ಅಲ್ಲಿರುವ ಹೊಳೆಲಕ್ಕಿ ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ. ಅಲ್ಲಿ ಇಟ್ಟಂತಹ ಮೊಟ್ಟೆಗಳು ಮಳೆಗಾಲದಲ್ಲಿ ನೀರಿನ ರಭಸಕ್ಕೆ ತೇಲಿ ಹೋಗುತ್ತದೆ. ಇದರಿಂದ ಹಕ್ಕಿಗಳ, ಸಂತಾನಕ್ಕೆ ಧಕ್ಕೆ ಉಂಟಾಗಿದೆ. ಪ್ರವಾಸಿ ಆಕರ್ಷಣೆಯಾಗಿದ್ದ ಮಂಡಗದ್ದೆ ಪಕ್ಷಿಧಾಮ, ಹಕ್ಕಿಗಳ ವಿರಳತೆಯಿಂದಾಗಿ ತನ್ನ ನೈಸರ್ಗಿಕ ಸೊಬಗನ್ನು ಕಳೆದುಕೊಳ್ಳುವ ಹಂತದಲ್ಲಿದೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದ ಮಾನ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪಕ್ಷಿಧಾಮದ ಉಳಿವಿಗೆ ಕಾಳಜಿ ವ್ಯಕ್ತ ಪಡಿಸಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷಿಧಾಮದ ಅಭಿವೃದ್ಧಿಗೆ ಅಧಿಸೂಚನೆ ಘೋಷಿಸಲು ಪ್ರವಾಸೋಧ್ಯಮ ಇಲಾಖೆಯ ಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...