Sunday, May 25, 2025
Sunday, May 25, 2025

ಮಕ್ಕಳ ಸಂತಸದಲ್ಲಿ ಪಾಲ್ಗೊಂಡ, ಸಚಿವ ನಾಗೇಶ್

Date:

ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳ ಆರಂಭ. ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಶಿವಮೊಗ್ಗ ಸನಿಹದ ಮಲವಗೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದರು. ಮಕ್ಕಳೊಂದಿಗೆ ಸಚಿವರು ಸಂವಾದ ನಡೆಸಿದರು.”ಕಳೆದ ಹದಿನೈದು ದಿನಗಳಿಂದ ಶಾಲೆ ಯಾವಾಗ ಆರಂಭವಾಗುವುದು ಅಂತ ಕಾಯುತ್ತಿದ್ದರು. ಕಳೆದವಾರ ವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಲಾ ಆರಂಭದ ನಿರ್ಣಯ ತೆಗೆದುಕೊಳ್ಳಲಾಯಿತು. ಅದರ ಫಲವಾಗಿ ಇಂದು ಪ್ರಾಥಮಿಕ ಶಾಲೆಗಳು ಆರಂಭಗೊಂಡಿವೆ. ನಾನು ಕೂಡ ಉತ್ಸುಕತೆಯಿಂದ ಭೇಟಿ ನೀಡಿದ್ದೇನೆ. ಮಕ್ಕಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಪೋಷಕರು, ಶಿಕ್ಷಕರು ಹೂ ,ಸಿಹಿ ನೀಡಿ ಮಕ್ಕಳನ್ನು ಸ್ವಾಗತ ಮಾಡಿದ್ದಾರೆ.

ಸದ್ಯಕ್ಕೆ ಸಿಲಬಸ್ ಕಡಿತವಿಲ್ಲ. ಅಗತ್ಯಬಿದ್ದರೆ ಚಿಂತನೆ ಮಾಡ್ತೀವಿ. ಈಗ ಇರುವ ಅವಧಿಯಲ್ಲಿ ಸಿಲಬಸ್ ಪೂರ್ಣ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ. ರಜೆಯ ದಿನಗಳಲ್ಲೂ ಸಹ ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡುತ್ತೇವೆ. ರಾಜ್ಯದಲ್ಲಿ ಹಂತಹಂತವಾಗಿ ಎಲ್ಲಾ ಶಾಲೆಗಳು ಇಂದಿಗೆ ಆರಂಭವಾಗಿವೆ. ರಾಜ್ಯದ ಕೆಲವು ಶಾಲೆಗಳಲ್ಲಿ ಇನ್ನಷ್ಟು ವ್ಯವಸ್ಥೆ ಮಾಡಬೇಕಿದೆ. ಪ್ರತಿವರ್ಷ ಮಕ್ಕಳ ಸಂಖ್ಯೆಯನ್ನು ಆಧರಿಸಿ ಶಾಲೆಗಳಲ್ಲಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಳ ಮಾಡುತ್ತೇವೆ”ಎಂದು ಸಚಿವ ನಾಗೇಶ್ ರವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...