Tuesday, October 1, 2024
Tuesday, October 1, 2024

ಕಾಶ್ಮೀರ ಈಗ ಎಲ್ಲರಿಗೂ ಬಾಗಿಲು ತೆರೆದಿದೆ :ಅಮಿತ್ ಶಾ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಅಳಿಸಿ ಶಾಂತಿಭಂಗ ವನ್ನು ಕೊನೆಗಾಣಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.
ಜಮ್ಮುವಿನಲ್ಲಿರುವ ಗುರುದ್ವಾರ ಡಿಗಿಯಾನಾದ ಆಶ್ರಮಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು, ಈ ಕೇಂದ್ರಾಡಳಿತ ಪ್ರದೇಶವು ಪ್ರಧಾನಿ ನರೇಂದ್ರ ಮೋದಿಯವರ ಹೃದಯದಲ್ಲಿ ಜಾಗ ಪಡೆದಿದೆ. ಇದರ ಶಾಂತಿ ಮತ್ತು ಅಭಿವೃದ್ಧಿಗೆ ಧಕ್ಕೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.
70 ವರ್ಷದ ಬಳಿಕ ಜಮ್ಮು-ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ಸ್ಥಾಪನೆಯ ಗೌರವವು ಬಿಜೆಪಿಗೆ ಸಲ್ಲಬೇಕು. ಈಗ ಯಾರು ಬೇಕಿದ್ದರೂ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಬಹುದು, ಸಚಿವರಾಗಬಹುದು. ಪಂಡಿತ ಸಮುದಾಯವನ್ನು ಮತ ಬ್ಯಾಂಕ್ ಆಗಿ ಮಾತ್ರ ನೋಡಲಾಗಿತ್ತು. ಈಗ ಅವರಿಗೂ ಪ್ರಾತಿನಿಧ್ಯವಿದೆ. ಅವರ ಪ್ರತಿನಿಧಿಗೂ ಮುಖ್ಯಮಂತ್ರಿ ಆಗುವ ಅವಕಾಶವೂ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಐಐಟಿ ಜಮ್ಮುವಿನ ಹೊಸ ಕ್ಯಾಂಪಸ್ ಅನ್ನು ಅಮಿತ್ ಶಾ ಅವರು ಉದ್ಘಾಟಿಸಿದರು. ಎರಡು 210 ರೂ. ಕೋಟಿ ವೆಚ್ಚದಲ್ಲಿ ಈ ಕ್ಯಾಂಪಸ್ ನಿರ್ಮಿಸಲಾಗಿದೆ. ಉನ್ನತ ಶಿಕ್ಷಣ ಕೇಂದ್ರದ ಜೊತೆಗೆ ಹಾಸ್ಟೆಲ್, ಜಿಮ್ ಹಾಗೂ ಮತ್ತಿತರ ಸೌಲಭ್ಯಗಳನ್ನು ಕ್ಯಾಂಪಸ್ ನಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...