Thursday, August 13, 2026
Thursday, August 13, 2026

ಮೀನುಕೃಷಿಕರಿಗೂ ಈಗ ಕಿಸಾನ್ ಕಾರ್ಡ್

Date:

ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿನ ಎಲ್ಲಾ ಪ್ರಯೋಜನಗಳನ್ನು ಮೀನುಗಾರರಿಗೂ ನೀಡಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಲ್ ಮುರುಗನ್ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಯೋಜನೆಯಾಗಿದೆ. ಇದರ ಮೂಲಕ ರೈತರು ಸಕಾಲದಲ್ಲಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು 1998 ರಲ್ಲಿ ಪ್ರಾರಂಭಿಸಲಾಯಿತು. ರೈತರಿಗೆ ಸಕಾಲದಲ್ಲಿ ಅಲ್ಪಾವಧಿ ಸಾಲ ನೀಡುವುದು ಇದರ ಉದ್ದೇಶವಾಗಿದೆ. ಈಗ ಈ ಸೌಲಭ್ಯವನ್ನು ಶೀಘ್ರವೇ ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಖಾತೆ ಸಹಾಯಕ ಸಚಿವ ಎಲ್. ಮುರುಗನ್ ಹೇಳಿದ್ದಾರೆ.
ಎಲ್ಲ ರೈತರು ಅಥವಾ ಜಂಟಿ ರೈತರು, ಗುತ್ತಿಗೆ ರೈತರು, ಹತ್ತು ರೈತರು ಒಳಗೊಂಡಿರುವ ಜಂಟಿ ಹೊಣೆಗಾರಿಕೆ ಗುಂಪುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯಬಹುದಾಗಿದೆ. ಇವರು ಒಂದು ಅವಧಿಯಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು. ಕೆಸಿಸಿ ಸಾಲ ಪಡೆದ ರೈತರ ಬೆಳೆಗಳಿಗೆ ಬೆಳೆ ವಿಮೆ ಕೂಡ ಲಭ್ಯವಿರುತ್ತದೆ. ಈಗ ಎಲ್ಲ ಸೌಲಭ್ಯಗಳನ್ನು ಮೀನುಗಾರರಿಗೂ ಕಲ್ಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
“ಕಡಲ ಆಹಾರ ರಪ್ತು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಅಂತರಾಷ್ಟ್ರೀಯ ಗುಣಮಟ್ಟ ಹಾಗೂ ಅತ್ಯಾಧುನಿಕ ಸಂಸ್ಕರಣಾ ಘಟಕಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ” ಎಂದು ಸಚಿವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...