Friday, March 6, 2026
Friday, March 6, 2026

ಮೀನುಕೃಷಿಕರಿಗೂ ಈಗ ಕಿಸಾನ್ ಕಾರ್ಡ್

Date:

ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿಯಲ್ಲಿನ ಎಲ್ಲಾ ಪ್ರಯೋಜನಗಳನ್ನು ಮೀನುಗಾರರಿಗೂ ನೀಡಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಸಿದ್ದಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಲ್ ಮುರುಗನ್ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಯೋಜನೆಯಾಗಿದೆ. ಇದರ ಮೂಲಕ ರೈತರು ಸಕಾಲದಲ್ಲಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು 1998 ರಲ್ಲಿ ಪ್ರಾರಂಭಿಸಲಾಯಿತು. ರೈತರಿಗೆ ಸಕಾಲದಲ್ಲಿ ಅಲ್ಪಾವಧಿ ಸಾಲ ನೀಡುವುದು ಇದರ ಉದ್ದೇಶವಾಗಿದೆ. ಈಗ ಈ ಸೌಲಭ್ಯವನ್ನು ಶೀಘ್ರವೇ ಮೀನುಗಾರರಿಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಖಾತೆ ಸಹಾಯಕ ಸಚಿವ ಎಲ್. ಮುರುಗನ್ ಹೇಳಿದ್ದಾರೆ.
ಎಲ್ಲ ರೈತರು ಅಥವಾ ಜಂಟಿ ರೈತರು, ಗುತ್ತಿಗೆ ರೈತರು, ಹತ್ತು ರೈತರು ಒಳಗೊಂಡಿರುವ ಜಂಟಿ ಹೊಣೆಗಾರಿಕೆ ಗುಂಪುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಪಡೆಯಬಹುದಾಗಿದೆ. ಇವರು ಒಂದು ಅವಧಿಯಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು. ಕೆಸಿಸಿ ಸಾಲ ಪಡೆದ ರೈತರ ಬೆಳೆಗಳಿಗೆ ಬೆಳೆ ವಿಮೆ ಕೂಡ ಲಭ್ಯವಿರುತ್ತದೆ. ಈಗ ಎಲ್ಲ ಸೌಲಭ್ಯಗಳನ್ನು ಮೀನುಗಾರರಿಗೂ ಕಲ್ಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
“ಕಡಲ ಆಹಾರ ರಪ್ತು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಅಂತರಾಷ್ಟ್ರೀಯ ಗುಣಮಟ್ಟ ಹಾಗೂ ಅತ್ಯಾಧುನಿಕ ಸಂಸ್ಕರಣಾ ಘಟಕಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ” ಎಂದು ಸಚಿವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...