Friday, March 20, 2026
Friday, March 20, 2026

T20- ಬಿ ಗ್ರೂಪ್ ಗೆ ಆಫ್ಘನಿಸ್ತಾನ್

Date:

ಟಿ – 20 ವಿಶ್ವಕಪ್ ಟೂರ್ನಿಯ ಪಂದ್ಯವು ಅಫ್ಘಾನಿಸ್ತಾನ ಮತ್ತು ಸ್ಕಾಟ್ಲೆಂಡ್ ನಡುವೆ ನಡೆಯಿತು. ಅಫ್ಘಾನಿಸ್ತಾನ ತಂಡವು ಸ್ಕಾಟ್ಲೆಂಡ್ ತಂಡದ ವಿರದ್ಧ ನಿರಾಯಾಸ ಗೆಲುವನ್ನು ಸಾಧಿಸಿದೆ.
ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಟಿ – 20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ 2 ನೇ ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ತಾನವು ಸ್ಕಾಟ್ಲೆಂಡ್ ವಿರುದ್ಧ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳ ನ್ನು ಕಲೆ ಹಾಕಿದೆ.
ಆರಂಭಿಕ ಜೋಡಿಯಲ್ಲಿ ಹಜರತ್ ಉಲ್ಲಾ ಜಜೈ ಮತ್ತು ಮೊಹಮ್ಮದ್ ಶೆಹಜಾದ್ ಭರ್ಜರಿ ಆಟದೊಂದಿಗೆ ಮಿಂಚಿದರು. ಆರಂಭದ ಜೊತೆಯಾಟದಲ್ಲಿ ಆಡಿದ ಅವರು ಕೆಲವು ಎಸೆತಗಳನ್ನು ತಾಳ್ಮೆಯಿಂದ ಎದುರಿಸಿದರು.ಉಲ್ಲಾ ಜಜೈ ಮತ್ತು ಮೊಹಮ್ಮದ್ ಶೆಹಜಾದ್ ನಂತರ ಬೌಂಡರಿಗಳನ್ನು ಸಿಡಿಸಿ.ಕೇವಲ 35 ಎಸೆತಗಳಲ್ಲಿ 54 ರನ್ ಗಳನ್ನು ಸೇರಿಸಿದರು.ನಂತರ ಷರೀಪ್ ಎಸೆತಗಳಲ್ಲಿ ಮೊಹಮ್ಮದ್ ಶೆಹಜಾದ್ ಔಟಾದರು. ನಂತರ 3 ನೆ ಹಂತದ ವಿಕೆಟ್ ಗೆ ಅಂಕಣಕ್ಕೆ ಇಳಿದ ಗುರ್ಬಾಜ್ ರವರು ಜಜೈ ಜೊತೆಗೂಡಿ ಸಿಕ್ಸರ್ ಮತ್ತು ಬೌಂಡರಿಗಳ ಮೂಲಕ ಗುರ್ಬಾಜ್ ರವರು ರನ್ ರೇಟ್ ವೇಗವನ್ನು ಹೆಚ್ಚಿಸಿದರು.
ಕೇವಲ 3 ಎಸೆತಗಳಲ್ಲಿ ತಲಾ 3 ಸಿಕ್ಸರ್ ಮತ್ತು ಬೌಂಡರಿ ಸಿಡಿಸಿದ ಜಜೈ 44 ರನ್ ಗಳನ್ನ ಕಲೆ ಹಾಕಿ ಔಟಾದರು.
ಜಜೈ ಔಟಾದ ಬಳಿಕ 4 ನೆ ವಿಕೆಟ್ ಹಂತಕ್ಕೆ ಕಾಲಿಟ್ಟು ಅಂಕಣಕ್ಕೆ ಇಳಿದ ಜದ್ರಾನ್. ಗುರ್ಬಾಜ್ ಜೊತೆಗೂಡಿ ಸ್ಕಾಟ್ಲೆಂಡ್ ತಂಡದ ಬೌಲರ್ ಗಳನ್ನ ಕಂಗೇಡುವಂತೆ ಮಾಡಿ 87 ರನ್ ಕಲೆ ಹಾಕಿ ಅಫ್ಘಾನಿಸ್ತಾನದ ಮೊತ್ತವನ್ನು ಗಡಿ ದಾಟಿಸಿದರು.
ಕೊನೆಯ ಓವರ್ ಗಳಲ್ಲಿ ಮತ್ತಷ್ಟು ಆಕ್ರಮಣಕಾರಿಯಾಗಿ ಆಟ ಆಡಿದ ಜಾದ್ರಾನ್ ರವರು 5 ಬೌಂಡರಿ ಮತ್ತು 3 ಸಿಕ್ಸರ್ ಮೂಲಕ ಬ್ಯಾಟಿಂಗ್ ಆಡಿದ ಅವರು 200 ರನ್ ಸಮೀಪ ತಲುಪಿಸಿ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು.
ತಂಡದ ಎಲ್ಲಾ ಆಟಗಾರರ ಉತ್ತಮ ಪ್ರದರ್ಶನದಿಂದಾಗಿ ಟಿ – 20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಮೊದಲನೇ ಸ್ಥಾನ ತಲುಪಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...