Monday, February 2, 2026
Monday, February 2, 2026

ರಾಜ್ಯದಲ್ಲಿ ನವೋದ್ಯಮಗಳಿಗೆ ಸ್ವಾಗತ

Date:

ರಾಜ್ಯದ ನವೋದ್ಯಮಗಳಿಗೆ ಶೇ.90 ರಷ್ಟು ವಿದೇಶಿ ಹೂಡಿಕೆ ಇದೆ. ಸ್ಥಳೀಯರೂ ಬಂಡವಾಳ ಹೂಡಿದರೆ, ಆರ್ಥಿಕತೆಗೆ ವೇಗ ಸಿಗಲಿದೆ ಎಂದು ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾಕ್ಟರ್ ಸಿ.ಎನ್. ಅಶ್ವತ್ ನಾರಾಯಣ್ ಹೇಳಿದರು.
ಮೈಸೂರಿನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಅಭಿಯಾನದಡಿಯಲ್ಲಿ ಆಯೋಜಿಸಿದ್ದ “ದಿ ಬಿಗ್ ಟೆಕ್ ಶೋ” ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಉದ್ಘಾಟಿಸಿದರು.
ಐಟಿ, ಬಿಟಿ , ಉದ್ಯೋಗಗಳು ಎಲ್ಲಾ ನಗರಗಳಲ್ಲಿ ದೊರೆಯಲೆಂದೇ ಭೂಸುಧಾರಣಾ ಕಾಯ್ದೆ ಮತ್ತು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ತರಲಾಗಿದೆ. ಎಲ್ಲಾ ಪದವಿಗಳಲ್ಲಿ ತಾಂತ್ರಿಕ ಶಿಕ್ಷಣದ ವಿಷಯವನ್ನು ಕಡ್ಡಾಯಗೊಳಿಸಲು ಚಿಂತಿಸಲಾಗಿದೆ. ಬೆಂಗಳೂರು ಹೊರತಾಗಿ ಇತರೆಡೆ ಇಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ 600 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ರಾಜ್ಯ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,ಮೇಯರ್ ಸುನಂದಾ ಫಾಲನೇತ್ರ , ಕೆಡಿಇಎಂ ಮುಖ್ಯಸ್ಥ ಬಿ.ವಿ.ನಾಯ್ಡು ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...