Wednesday, June 24, 2026
Wednesday, June 24, 2026

ಮಾದರಿ ಶಾಲೆ, ಶೈಕ್ಷಣಿಕ ಪ್ರಗತಿಗೆ ಮುನ್ನುಡಿ

Date:

ಕೋವಿಡ್ -19 ಪರಿಣಾಮದಿಂದ ಸುಮಾರು 2 ವರ್ಷಗಳಿಂದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿರುವುದು ಸುದ್ದಿಯಾಗಿತ್ತು. ಈ ಬಗ್ಗೆ ಶಿಕ್ಷಣ ಹಾಗೂ ಆರೋಗ್ಯ ತಜ್ಞರ ಸಲಹೆಯಂತೆ ಸರ್ಕಾರ ಶಾಲೆಯನ್ನು ಆರಂಭಿಸಿದೆ.

ಸಾರ್ವಜನಿಕ ವಲಯದಿಂದ ಹಲವರು ಈ ನಿರ್ಧಾರದ ಬಗ್ಗೆ ಟೀಕೆ-ಟಿಪ್ಪಣಿಗಳು ಬಂದವು. ಪ್ರಸ್ತುತ ಶಾಲೆಯ ಆರಂಭವಾಗಿದ್ದು ಮಕ್ಕಳು ಮತ್ತು ಪೋಷಕರಲ್ಲಿ ಸಂತಸ ಮನೆಮಾಡಿದೆ. ಮಕ್ಕಳು ಶಾಲೆಗಳಿಗೆ ಉತ್ಸಾಹದಿಂದ ತೆರಳುತ್ತಿದ್ದಾರೆ.

ಗ್ರಾಮೀಣ ಭಾಗದ ಮಕ್ಕಳು ಶಾಲೆಗಳಲ್ಲಿ ಇಂದಿಗೂ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ನೀಡುವುದು ಸರ್ಕಾರದ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಪಂಚಾಯತಿಗೆ ಒಂದು ಮಾದರಿ ಶಾಲೆ ನಿರ್ಮಾಣ ಮಾಡುವ ಬಗ್ಗೆ ಸರ್ಕಾರ ಚಿಂತನೆಯ ನಡೆಸಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಬಿ.ಸಿ. ನಾಗೇಶ್ ಅವರು ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಮಾದರಿ ಶಾಲೆಯ ರೂಪರೇಷೆಗಳು ಹೇಗಿರಬೇಕು? ಅವುಗಳ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ಮುಂತಾದ ವಿಷಯಗಳನ್ನ ಸರ್ಕಾರವು ಒಂದು ಮಾರ್ಗ ಸೂಚಿಯಾಗಿ ಸಿದ್ಧಪಡಿಸಬೇಕಿದೆ. ಮಾದರಿ ಶಾಲೆ ಆಗುವಲ್ಲಿ ವೃಥಾ ಪೈಪೋಟಿಗೆ ಬಿಡದೆ ಗುಣಮಟ್ಟಕ್ಕೆ ಗಮನ ನೀಡುವಂತಾಗಬೇಕು. ಮಾದರಿ ಶಾಲೆಯ ಚಿಂತನೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಸಹಕಾರಿಯಾದರೆ ಸರ್ಕಾರದ ಶ್ರಮ ಸಾರ್ಥಕವಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...