Tuesday, October 1, 2024
Tuesday, October 1, 2024

ಕುಲಾಂತರಿ ತಳಿ : ಕೃಷಿಗೆ ಧಕ್ಕೆ

Date:

ಬೆಳೆಗಳಲ್ಲಿ ಕುಲಾಂತರಿ ಪದ್ಧತಿ ಬಂಡವಾಳಶಾಹಿಗಳಿಗೆ ಮಣೆ ಹಾಕಿದಂತೆ. ಈ ಕುಲಾಂತರಿ ಪದ್ಧತಿ ಆಹಾರ ಮಾಲಿನ್ಯ, ಪರಿಸರ ಮಾಲಿನ್ಯದ ಜೊತೆಗೆ ರೈತರ ಮೂಲ ಬೇಸಾಯ ಪದ್ಧತಿ ಕಸಿದುಕೊಂಡಂತಾಗುತ್ತದೆ ಎಂದು ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ. ಹಲವು ದೇಶಗಳು ಕುಲಾಂತರಿ ಬೆಳೆಯನ್ನು ನಿಷೇಧಿಸಿವೆ. ಆದರೆ, ಭಾರತ ಮಾತ್ರ ಇದನ್ನು ಸ್ವೀಕರಿಸುತ್ತಿರುವುದು ದುಃಖದ ಸಂಗತಿಯಾಗಿದೆ. ಈ ತಂತ್ರಜ್ಞಾನದಿಂದ ಕೇವಲ ಪರಿಸರ ಮಾತ್ರ ನಾಶವಲ್ಲ. ಮನುಕುಲಕ್ಕೂ ತೊಂದರೆಯಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಕುಲಾಂತರಿ ಪ್ರಯೋಗ ಅನಿವಾರ್ಯವಲ್ಲ. ಯುರೋಪ್ ನ 28ಕ್ಕೂ ಹೆಚ್ಚು ದೇಶಗಳು ಇದನ್ನು ಒಪ್ಪಿಲ್ಲ. ಒರಿಸ್ಸಾ, ಕೇರಳ, ಛತ್ತಿಸ್ ಗಢ್, ಬಿಹಾರ್, ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೂಡ ಇದನ್ನು ವಿರೋಧಿಸುತ್ತಿವೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕುಲಾಂತರಿ ಪ್ರಯೋಗಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಯಶವಂತರಾವ್ ಘೋರ್ಪಡೆ, ವೀರೇಶ್, ಎಚ್.ಪಿ. ಹಿರಣ್ಣಯ್ಯ, ಸಣ್ಣ ರಂಗಪ್ಪ, ಮೋಹನ್, ಜಗದೀಶ್ ನಾಯ್ಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...