Wednesday, June 24, 2026
Wednesday, June 24, 2026

ಕುಲಾಂತರಿ ತಳಿ : ಕೃಷಿಗೆ ಧಕ್ಕೆ

Date:

ಬೆಳೆಗಳಲ್ಲಿ ಕುಲಾಂತರಿ ಪದ್ಧತಿ ಬಂಡವಾಳಶಾಹಿಗಳಿಗೆ ಮಣೆ ಹಾಕಿದಂತೆ. ಈ ಕುಲಾಂತರಿ ಪದ್ಧತಿ ಆಹಾರ ಮಾಲಿನ್ಯ, ಪರಿಸರ ಮಾಲಿನ್ಯದ ಜೊತೆಗೆ ರೈತರ ಮೂಲ ಬೇಸಾಯ ಪದ್ಧತಿ ಕಸಿದುಕೊಂಡಂತಾಗುತ್ತದೆ ಎಂದು ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ. ಹಲವು ದೇಶಗಳು ಕುಲಾಂತರಿ ಬೆಳೆಯನ್ನು ನಿಷೇಧಿಸಿವೆ. ಆದರೆ, ಭಾರತ ಮಾತ್ರ ಇದನ್ನು ಸ್ವೀಕರಿಸುತ್ತಿರುವುದು ದುಃಖದ ಸಂಗತಿಯಾಗಿದೆ. ಈ ತಂತ್ರಜ್ಞಾನದಿಂದ ಕೇವಲ ಪರಿಸರ ಮಾತ್ರ ನಾಶವಲ್ಲ. ಮನುಕುಲಕ್ಕೂ ತೊಂದರೆಯಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಕುಲಾಂತರಿ ಪ್ರಯೋಗ ಅನಿವಾರ್ಯವಲ್ಲ. ಯುರೋಪ್ ನ 28ಕ್ಕೂ ಹೆಚ್ಚು ದೇಶಗಳು ಇದನ್ನು ಒಪ್ಪಿಲ್ಲ. ಒರಿಸ್ಸಾ, ಕೇರಳ, ಛತ್ತಿಸ್ ಗಢ್, ಬಿಹಾರ್, ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೂಡ ಇದನ್ನು ವಿರೋಧಿಸುತ್ತಿವೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕುಲಾಂತರಿ ಪ್ರಯೋಗಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಯಶವಂತರಾವ್ ಘೋರ್ಪಡೆ, ವೀರೇಶ್, ಎಚ್.ಪಿ. ಹಿರಣ್ಣಯ್ಯ, ಸಣ್ಣ ರಂಗಪ್ಪ, ಮೋಹನ್, ಜಗದೀಶ್ ನಾಯ್ಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...