Tuesday, November 18, 2025
Tuesday, November 18, 2025

ಕುಲಾಂತರಿ ತಳಿ : ಕೃಷಿಗೆ ಧಕ್ಕೆ

Date:

ಬೆಳೆಗಳಲ್ಲಿ ಕುಲಾಂತರಿ ಪದ್ಧತಿ ಬಂಡವಾಳಶಾಹಿಗಳಿಗೆ ಮಣೆ ಹಾಕಿದಂತೆ. ಈ ಕುಲಾಂತರಿ ಪದ್ಧತಿ ಆಹಾರ ಮಾಲಿನ್ಯ, ಪರಿಸರ ಮಾಲಿನ್ಯದ ಜೊತೆಗೆ ರೈತರ ಮೂಲ ಬೇಸಾಯ ಪದ್ಧತಿ ಕಸಿದುಕೊಂಡಂತಾಗುತ್ತದೆ ಎಂದು ರೈತ ಸಂಘದ ಮುಖಂಡ ಕೆ.ಟಿ. ಗಂಗಾಧರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ. ಹಲವು ದೇಶಗಳು ಕುಲಾಂತರಿ ಬೆಳೆಯನ್ನು ನಿಷೇಧಿಸಿವೆ. ಆದರೆ, ಭಾರತ ಮಾತ್ರ ಇದನ್ನು ಸ್ವೀಕರಿಸುತ್ತಿರುವುದು ದುಃಖದ ಸಂಗತಿಯಾಗಿದೆ. ಈ ತಂತ್ರಜ್ಞಾನದಿಂದ ಕೇವಲ ಪರಿಸರ ಮಾತ್ರ ನಾಶವಲ್ಲ. ಮನುಕುಲಕ್ಕೂ ತೊಂದರೆಯಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಕುಲಾಂತರಿ ಪ್ರಯೋಗ ಅನಿವಾರ್ಯವಲ್ಲ. ಯುರೋಪ್ ನ 28ಕ್ಕೂ ಹೆಚ್ಚು ದೇಶಗಳು ಇದನ್ನು ಒಪ್ಪಿಲ್ಲ. ಒರಿಸ್ಸಾ, ಕೇರಳ, ಛತ್ತಿಸ್ ಗಢ್, ಬಿಹಾರ್, ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೂಡ ಇದನ್ನು ವಿರೋಧಿಸುತ್ತಿವೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕುಲಾಂತರಿ ಪ್ರಯೋಗಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಯಶವಂತರಾವ್ ಘೋರ್ಪಡೆ, ವೀರೇಶ್, ಎಚ್.ಪಿ. ಹಿರಣ್ಣಯ್ಯ, ಸಣ್ಣ ರಂಗಪ್ಪ, ಮೋಹನ್, ಜಗದೀಶ್ ನಾಯ್ಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ” ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರ ಸಂಕಿರಣ

Kuvempu University ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ನ.18ರಂದು...

Agricultural University ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಬೇಕು.ಕೃಷಿಯಲ್ಲಿ ಆಂದೋಲನವಾಗಬೇಕು- ಸಚಿವ ಎನ್.ಚಲುವರಾಯ ಸ್ವಾಮಿ

Agricultural University ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ,ಹೊಸ...

ಮಾಹಿತಿ ಹಕ್ಕು ಕೋರಿ ಬರುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ- ಆಯುಕ್ತ ರುದ್ರಣ್ಣ ಹರ್ತಿಕೋಟೆ

ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ...