Sunday, May 3, 2026
Sunday, May 3, 2026

ಪಕ್ಷ ನಿಷ್ಠೆಯಷ್ಟೇ ಸಮಾಜ ನಿಷ್ಠೆಯೂ ಅಗತ್ಯ

Date:

ರಾಜಕೀಯ ಅಧಿಕಾರ ಶಾಶ್ವತವಲ್ಲ. ಆದರೆ ಸಮುದಾಯದ ಮತಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಸಮುದಾಯದವರು ಪಕ್ಷನಿಷ್ಠೆ ಜೊತೆಗೆ ಸಮಾಜಕ್ಕೆ ನಿಷ್ಠರಾಗಿರಬೇಕು. ಮಠದ ಕಾರ್ಯಗಳಿಗೆ ಸಮಾಜದವರು ಸಹಕರಿಸಬೇಕು ಎಂದು ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಪೀಠಾಧ್ಯಕ್ಷ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
‘ನೂರು ದಿನ ಸಾವಿರ ಹಳ್ಳಿ’ ಕಾರ್ಯಕ್ರಮದ ಪ್ರಯುಕ್ತ ಶಿಕಾರಿಪುರದ ಕನಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಠದೊಂದಿಗೆ ಭಕ್ತರು ನಿರಂತರ ಸಂಪರ್ಕ ಹೊಂದಬೇಕು. ನಮ್ಮ ಮತಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆಯಲು ಭಕ್ತರ ಸಹಕಾರ ಮುಖ್ಯವಾಗಿದೆ. ಪಕ್ಷ ರಾಜಕಾರಣಕ್ಕೆ ಸೀಮಿತರಾಗದೇ ಕುರುಬ ಸಮಾಜದ ಸಂಘಟನೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಸಂಕ್ರಾಂತಿಯಿಂದ ಹೊಸದುರ್ಗ ಶಾಖಾ ಮಠದಿಂದ “ನೂರು ದಿನ ಸಾವಿರ ಹಳ್ಳಿ” ಕಾರ್ಯಕ್ರಮ ಆಯೋಜಿಸಿದ್ದು, ನೂರು ದಿನಗಳಲ್ಲಿ ಸಾವಿರ ಹಳ್ಳಿಗಳಿಗೆ ಭೇಟಿ ನೀಡಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಕಬಾಡಿ ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುರುಬ ಸಮಾಜ ಉಪಾಧ್ಯಕ್ಷ ಭದ್ರಾಪುರ ಹಾಲಪ್ಪ, ತಾಲೂಕು ಗೌರವಾಧ್ಯಕ್ಷ ನಗರದ ಮಹಾದೇವಪ್ಪ, ಉಪಾಧ್ಯಕ್ಷ ಗೋಣಿ ಮಾಲತೇಶ್, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಜೆ. ಸುಕೇಂದ್ರಪ್ಪ, ಸಂಚಾರಿ ಕುರಿಗಾರರ ಸಂಘ ರಾಜ್ಯ ಉಪಾಧ್ಯಕ್ಷ ಡಾ.ಪ್ರಶಾಂತ್, ರಾಜ್ಯ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಂ. ಶರತ್, ಹಾಗೂ ಚಂದ್ರಗುಪ್ತ ಮೌರ್ಯ ಸೊಸೈಟಿ ಅಧ್ಯಕ್ಷ ಸಕಲೇಶ್ ಹುಲ್ಮಾರ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಮತ್ತು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...