Friday, March 20, 2026
Friday, March 20, 2026

ಆತಂಕ ಸೃಷ್ಟಿಸಿದ ಎವೈ 4.2 ವೈರಾಣು

Date:

ರಾಜ್ಯದಲ್ಲಿ ಬಹುತೇಕರು ಕೋವಿಡ್ ಲಸಿಕೆ ತೆಗೆದುಕೊಂಡಿರುವುದರಿಂದ ಎವೈ 4.2 ವೈರಾಣು ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ . ಅಶ್ವತ್ ನಾರಾಯಣ್ ಹೇಳಿದ್ದಾರೆ.
ವೈರಾಣುಗಳು ರೂಪಂತರ ಆಗುವುದನ್ನು ತಡೆಯಲು ಸಾಧ್ಯವಿಲ್ಲ. ಆದರೆ ರೋಗ ನಿರೋಧಕ ಲಸಿಕೆ ಪಡೆಯುವ ಮೂಲಕ ಕೋವಿಡ್ ನಿಯಂತ್ರಿಸಬಹುದು ಎಂದು ಹೇಳಿದರು.
ಸುಮಾರು ಎರಡು ವರ್ಷಗಳ ಹಿಂದೆ ಆರಂಭವಾದ ಕೋವಿಡ್-19 ಸಾಂಕ್ರಾಮಿಕ ರೋಗದ ಕಾಟ ಈಗ ಮತ್ತೊಮ್ಮೆ ಕಾಡುವ ಭೀತಿ ಆವರಿಸಿದೆ. ಬ್ರಿಟನ್, ರಷ್ಯಾ, ಯುರೋಪ್ ನ ಕೆಲವು ದೇಶಗಳಲ್ಲಿ ಪತ್ತೆಯಾಗಿರುವ ಕೋವಿಡ್ ನ ಹೊಸ ತಳಿಯ ವೈರಾಣು ಎವೈ 4.2 ರಾಜ್ಯಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಮೂರು ಸೇರಿ ರಾಜ್ಯದಲ್ಲಿ ಒಟ್ಟು ಏಳು ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿದು ಬಂದಿದೆ.
ಕೆಲದಿನಗಳ ಹಿಂದೆ ಸೋಂಕಿತರ ಮಾಹಿತಿಯನ್ನು ಅನುಕ್ರಮಣಿಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲಾ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ವಿಚಾರವಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಆರೋಗ್ಯ ಸಚಿವ ಡಾಕ್ಟರ್ ಕೆ.ಸುಧಾಕರ್ ಸಭೆ ನಡೆಸಿದರು.
‘ಬ್ರಿಟನ್ ಮತ್ತು ರಷ್ಯಾದಲ್ಲಿ ಪತ್ತೆಯಾಗಿರುವ ಎವೈ 4.2 ವೈರಾಣು ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಕೋವಿಡ್ ನ ಯಾವುದೇ ಹೊಸ ತಳಿ ಬಂದರೂ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿ, ತಜ್ಞರ ಅಭಿಪ್ರಾಯವನ್ನು ಕೇಳಲಾಗುವುದು. ಎವೈ 4.2 ವೈರಾಣು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬುದನ್ನು ಗಮನಿಸಬೇಕಾಗಿದೆ ಎಂದು ಹೇಳಿದರು.
ಈ ಕುರಿತು ದೆಹಲಿಯ ವಂಶವಾಹಿ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಅನುರಾಗ್ ಅಗರ್ವಾಲ್ ರವರು, “ಪ್ರಯೋಗಾಲಯದಲ್ಲಿ ಈ ಕೆಲವೇ ವೈರಾಣುವನ್ನು ನೋಡಿರುವುದಾಗಿಯೂ ಆದರೆ, ಅವುಗಳನ್ನು ವರ್ಗೀಕರಿಸುವುದು ಕ್ಲಿಷ್ಟಕರವಾಗಿದೆ” ಎಂದಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸೂಖ್ ಮಾಂಡವಿಯಾ ಅವರು ಈ ಹೊಸ ವೈರಾಣುವಿನ ಬಗ್ಗೆ ತಜ್ಞರು ಅನ್ವೇಷಣೆ ಮಾಡುತ್ತಿದ್ದಾರೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...