Monday, February 2, 2026
Monday, February 2, 2026

ಆತಂಕ ಸೃಷ್ಟಿಸಿದ ಎವೈ 4.2 ವೈರಾಣು

Date:

ರಾಜ್ಯದಲ್ಲಿ ಬಹುತೇಕರು ಕೋವಿಡ್ ಲಸಿಕೆ ತೆಗೆದುಕೊಂಡಿರುವುದರಿಂದ ಎವೈ 4.2 ವೈರಾಣು ಬಗ್ಗೆ ಆತಂಕ ಪಡಬೇಕಾಗಿಲ್ಲ ಎಂದು
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ . ಅಶ್ವತ್ ನಾರಾಯಣ್ ಹೇಳಿದ್ದಾರೆ.
ವೈರಾಣುಗಳು ರೂಪಂತರ ಆಗುವುದನ್ನು ತಡೆಯಲು ಸಾಧ್ಯವಿಲ್ಲ. ಆದರೆ ರೋಗ ನಿರೋಧಕ ಲಸಿಕೆ ಪಡೆಯುವ ಮೂಲಕ ಕೋವಿಡ್ ನಿಯಂತ್ರಿಸಬಹುದು ಎಂದು ಹೇಳಿದರು.
ಸುಮಾರು ಎರಡು ವರ್ಷಗಳ ಹಿಂದೆ ಆರಂಭವಾದ ಕೋವಿಡ್-19 ಸಾಂಕ್ರಾಮಿಕ ರೋಗದ ಕಾಟ ಈಗ ಮತ್ತೊಮ್ಮೆ ಕಾಡುವ ಭೀತಿ ಆವರಿಸಿದೆ. ಬ್ರಿಟನ್, ರಷ್ಯಾ, ಯುರೋಪ್ ನ ಕೆಲವು ದೇಶಗಳಲ್ಲಿ ಪತ್ತೆಯಾಗಿರುವ ಕೋವಿಡ್ ನ ಹೊಸ ತಳಿಯ ವೈರಾಣು ಎವೈ 4.2 ರಾಜ್ಯಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಮೂರು ಸೇರಿ ರಾಜ್ಯದಲ್ಲಿ ಒಟ್ಟು ಏಳು ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿದು ಬಂದಿದೆ.
ಕೆಲದಿನಗಳ ಹಿಂದೆ ಸೋಂಕಿತರ ಮಾಹಿತಿಯನ್ನು ಅನುಕ್ರಮಣಿಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲಾ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ವಿಚಾರವಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಆರೋಗ್ಯ ಸಚಿವ ಡಾಕ್ಟರ್ ಕೆ.ಸುಧಾಕರ್ ಸಭೆ ನಡೆಸಿದರು.
‘ಬ್ರಿಟನ್ ಮತ್ತು ರಷ್ಯಾದಲ್ಲಿ ಪತ್ತೆಯಾಗಿರುವ ಎವೈ 4.2 ವೈರಾಣು ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಕೋವಿಡ್ ನ ಯಾವುದೇ ಹೊಸ ತಳಿ ಬಂದರೂ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿ, ತಜ್ಞರ ಅಭಿಪ್ರಾಯವನ್ನು ಕೇಳಲಾಗುವುದು. ಎವೈ 4.2 ವೈರಾಣು ಎಷ್ಟರ ಮಟ್ಟಿಗೆ ಪರಿಣಾಮಕಾರಿ ಎಂಬುದನ್ನು ಗಮನಿಸಬೇಕಾಗಿದೆ ಎಂದು ಹೇಳಿದರು.
ಈ ಕುರಿತು ದೆಹಲಿಯ ವಂಶವಾಹಿ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಅನುರಾಗ್ ಅಗರ್ವಾಲ್ ರವರು, “ಪ್ರಯೋಗಾಲಯದಲ್ಲಿ ಈ ಕೆಲವೇ ವೈರಾಣುವನ್ನು ನೋಡಿರುವುದಾಗಿಯೂ ಆದರೆ, ಅವುಗಳನ್ನು ವರ್ಗೀಕರಿಸುವುದು ಕ್ಲಿಷ್ಟಕರವಾಗಿದೆ” ಎಂದಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸೂಖ್ ಮಾಂಡವಿಯಾ ಅವರು ಈ ಹೊಸ ವೈರಾಣುವಿನ ಬಗ್ಗೆ ತಜ್ಞರು ಅನ್ವೇಷಣೆ ಮಾಡುತ್ತಿದ್ದಾರೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...