Wednesday, May 21, 2025
Wednesday, May 21, 2025

T – 20 ಅಸಿಸ್ ಗೆಲುವಿನ ನಗೆ

Date:

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A-ಗುಂಪಿನಲ್ಲಿರುವ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯಿತು. ಶ್ರೀಲಂಕಾ ತಂಡದ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಗಳಿಸಿತು.
ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಆಡಿದ ಶ್ರೀಲಂಕಾ ತಂಡವು ಉತ್ತಮ ಆರಂಭ ಮಾಡಿತು. 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. 154 ರನ್ ಸಾಧಾರಣ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ಆಸ್ಟ್ರೇಲಿಯಾ ತಂಡ ಕೇವಲ 17 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 155 ರನ್ ಬಾರಿಸಿ 7 ವಿಕೆಟ್ ಗಳಿಂದ ಜಯ ಸಾಧಿಸಿದೆ.
ಲಂಕಾ ಇನ್ನಿಂಗ್ಸ್ ನ 3 ನೇ ಓವರ್ ನಲ್ಲಿಯೇ ಪ್ಯಾಟ್ – ಕಮಿನ್ಸ್ ಎಸೆತದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಪಥುಮ್ – ನಿಸಾಂಕಾ 7 ರನ್ ಗಳಿಗೆ ಔಟಾದರು. ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ 27 ರನ್ ಗಳಿಗೆ 2 ವಿಕೆಟ್ ತೆಗೆದರು.ಮತ್ತು ಪ್ಯಾಡ್ ಕಮಿನ್ಸ್ 34 ರನ್ ಗಳಿಗೆ 2 ವಿಕೆಟ್ ತೆಗೆದರು. ಹಾಗೆಯೇ ಸ್ಪಿನ್ನರ್ ಯಾಡಂ ಜಂಪಾ 12 ರನ್ ಗಳಿಗೆ 2 ವಿಕೆಟ್ ತೆಗೆದರು. ಇವರ ಉತ್ತಮ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಉತ್ತಮ ಮೊತ್ತ ಕಲೆಹಾಕದಂತೆ ತಡೆಯೊಡ್ಡಿದರು. ಆದರೆ ಅಂಕಣದಲ್ಲಿದ್ದ ಕುಶಾಲ ಪರೆಕಾ ಕೇವಲ 25 ಎಸೆತಕ್ಕೆ 35 ರನ್ ಗಳಿಸಿದರು. ಹಾಗೆಯೇ ಅವರೊಂದಿಗೆ ಸೇರಿಕೊಂಡು ಆಟ ಆಡಿದ ಅಸಲಂಕಾ 27 ಎಸೆತಕ್ಕೆ 35 ರನ್ ಗಳಿಸಿ ಇವರ ಜೊತೆಯಾಟದಲ್ಲಿ 63 ರನ್ ಸೇರಿಸಿ ರನ್ ರೇಟ್ ಹೆಚ್ಚಿಸಿದರು.
ಆದರೆ ಆಸ್ಟ್ರೇಲಿಯಾ ತಂಡದ ಬೌಲರ್ ಗಳಾದ ಸ್ಪಿನ್ನರ್ ಯಾಡಮ್ ಜಂಪಾ ಮತ್ತು ಮಿಚೆಲ್ ಸ್ಟಾರ್ಕ್ ಇವರ ರೋಮಂಚಕ ಬೌಲರ್ ನಿಂದ 2 ವಿಕೆಟ್ ಕಳೆದುಕೊಂಡ ಶ್ರೀಲಂಕಾ ತಂಡ ರನ್ ಗಳಿಕೆಯ ವೇಗ ಕಡಿಮೆ ಮಾಡಿಕೊಂಡಿತು.
ಅಂತೆಯೇ ನಂತರ ಅಂಕಣಕ್ಕೆ ಇಳಿದ ರಾಜಪಕ್ಸ ಔಟಾಗದೆ 26 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿ 26 ರನ್ ಗಳ ಬಿರುಸಿನ ಬ್ಯಾಟಿಂಗ್ ನಿಂದಾಗಿ ತಂಡದ ಮೊತ್ತ ಹೆಚ್ಚಳಕ್ಕೆ ಕಾರಣರಾದರು. ಆದರೆ ಇವರೆಲ್ಲ ಎಷ್ಟೇ ಪ್ರಯತ್ನಿಸಿದರು ಗೆಲ್ಲಲು ಸಾಧ್ಯವಾಗದ ಕಾರಣ ಆಸ್ಟ್ರೇಲಿಯ ತಂಡದ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ 17 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ ಭರ್ಜರಿ ಜಯ ಗಳಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿ

Santosh Lad ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ...

Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ‌ ಮುಖ್ಯ- ಹೆಚ್.ವೈ.ಸತೀಶ್

Shimoga News ವ್ಯಾಪಾರದ ಜತೆಯಲ್ಲಿ ಸಾರ್ವಜನಿಕ ಸೇವೆಯು ಮುಖ್ಯ. ಹಲವಾರು ಎಪಿಎಂಸಿಗಳಲ್ಲಿ...

Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾ

Guarantee scheme ನಾನು ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ...

Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾ

Gruha Lakshmi Scheme ಸಾಕಷ್ಟು ಓದಿಕೊಂಡಿರುವ ನಾನು ಬಡವರಿಗೆ ಸಹಾಯ ಮಾಡುವ,...