Monday, February 16, 2026
Monday, February 16, 2026

ನ.5ಕ್ಕೆ ಪ್ರಧಾನಿ ಕೇದಾರನಾಥ್ ಭೇಟಿ

Date:

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 5ರಂದು ಕೇದಾರನಾಥಕ್ಕೆ ಭೇಟಿ ನೀಡುವರು. ಅಲ್ಲಿ ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ.
ಅದರೊಂದಿಗೆ ಶ್ರೀ ಆದಿಶಂಕರಾಚಾರ್ಯ ಪ್ರತಿಮೆಯನ್ನು ಸಹ ಅನಾವರಣ ಮಾಡಲಿರುವ ಪ್ರಧಾನಿ,ಅನೇಕ ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
2013ರ ಪ್ರವಾಹದಲ್ಲಿ ಹಾನಿಗೊಳಗಾಗಿದ್ದ ಸಮಾಧಿಯನ್ನು ಮರುನಿರ್ಮಾಣ ಮಾಡಲಾಗಿದೆ. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ ಮೇಲ್ವಿಚಾರಣೆ ನಡೆಸುತ್ತಿರುವ ಪ್ರಧಾನಿಯವರ ಮಾರ್ಗದರ್ಶನದಲ್ಲಿ ಸಂಪೂರ್ಣ ಪುನರ್ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ. ಸರಸ್ವತಿ ಅಷ್ಟಪಥ್ ನಲ್ಲಿ ಪೂರ್ಣಗೊಂಡ ಮತ್ತು ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳನ್ನು ಪ್ರಧಾನಮಂತ್ರಿಯವರು ಪರಿಶೀಲಿಸಲಿದ್ದಾರೆ.
ಪ್ರಧಾನಮಂತ್ರಿಯವರು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಷ್ಟಪಥದ ಸರಸ್ವತಿ ರಿಟೇರಿಂಗ್ ವಾಲ್ ಮತ್ತು ಘಾಟ್ ಗಳು, ತೀರ್ಥ ಪುರೋಹಿತ್ ಮನೆಗಳು ಹಾಗೂ ಮಂದಾಕಿನಿ ನದಿಯ ಶೆಟ್ಟಿ ಸೇತುವೆ ಸೇರಿದಂತೆ ಪೂರ್ಣಗೊಂಡ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ.
ಸುಮಾರು 130 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಯೋಜನೆ ಗಳನ್ನು ಪೂರ್ಣಗೊಳಿಸಲಾಗಿದೆ. ಸಂಗಮ್ ಘಾಟ್, ಪ್ರಥಮ ಚಿಕಿತ್ಸೆ ಮತ್ತು ಪ್ರವಾಸಿ ಸೌಲಭ್ಯ ಕೇಂದ್ರ, ಆಡಳಿತ ಕಚೇರಿ ಮತ್ತು ಆಸ್ಪತ್ರೆ, ಎರಡು ಅತಿಥಿ ಗೃಹಗಳು, ಪೊಲೀಸ್ ಠಾಣೆ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್, ಮಂದಾಕಿನಿ ಅಷ್ಟಪಥ ಕ್ಯೂ ನಿರ್ವಹಣೆ ಮತ್ತು ಮಳೆ ಆಶ್ರಯ ಕೇಂದ್ರ, ಹಾಗೂ ಸರಸ್ವತಿ ನಾಗರಿಕ ಸೌಲಭ್ಯ ಕಟ್ಟಡ ಸೇರಿದಂತೆ 180 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...