Saturday, December 6, 2025
Saturday, December 6, 2025

ನಾಡ ಪ್ರೇಮ ಹೊಮ್ಮಿಸಿದ ಗೀತ ಗಾಯನ

Date:

ಕನ್ನಡದ ಅಭಿಮಾನವನ್ನ ನಾಡಿನಾದ್ಯಂತ ಪ್ರವಹಿಸುವ ಸಲುವಾಗಿ ಎಲ್ಲೆಡೆ ಕನ್ನಡ ಗೀತೆಗಳ ಗಾಯನವನ್ನು ಏರ್ಪಡಿಸಲಾಗುತ್ತಿದೆ. ಕನ್ನಡ ಪ್ರೀತಿ, ಅಭಿಮಾನ ನಾಡಪ್ರೇಮ ಸ್ಫುರಿಸುವ ನಿಟ್ಟಿನಲ್ಲಿ ಈ ಗೀತಗಾಯನ ಪ್ರಮುಖ ಪಾತ್ರವಹಿಸಲಿದೆ. ಅಂತೇ ಶಿವಮೊಗ್ಗದಲ್ಲಿ ಗಮನ ಸೆಳೆದ ವಿಶೇಷ ಗೀತ ಗಾಯನ..

ಕರ್ನಾಟಕ ರಾಜೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ ವಿಶೇಷ ಗೀತ ಗಾಯನ ಕಾರ್ಯಕ್ರಮವು ನಾಗರೀಕರ ಗಮನ ಸೆಳೆಯಿತು.
ನೂರಾರು ಜನರು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ‘ಬಾರಿಸು ಕನ್ನಡ ಡಿಂಡಿಮ’, ‘ಜೋಗದ ಸಿರಿ ಬೆಳಕಿನಲಿ’ ಹಾಗೂ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಗೀತೆಗಳನ್ನು ಹಾಡಿದರು. ಅರುಣ್ ಕುಮಾರ್ ನೇತೃತ್ವದ ತಂಡ ಗೀತಾ ಗಾಯನ ನಡೆಸಿಕೊಟ್ಟಿತು.

ಈ ಸಂದರ್ಭದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಸೇರಿದಂತೆ ಅಧಿಕಾರಿಗಳು, ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...