Wednesday, February 18, 2026
Wednesday, February 18, 2026

ನಾಡ ಪ್ರೇಮ ಹೊಮ್ಮಿಸಿದ ಗೀತ ಗಾಯನ

Date:

ಕನ್ನಡದ ಅಭಿಮಾನವನ್ನ ನಾಡಿನಾದ್ಯಂತ ಪ್ರವಹಿಸುವ ಸಲುವಾಗಿ ಎಲ್ಲೆಡೆ ಕನ್ನಡ ಗೀತೆಗಳ ಗಾಯನವನ್ನು ಏರ್ಪಡಿಸಲಾಗುತ್ತಿದೆ. ಕನ್ನಡ ಪ್ರೀತಿ, ಅಭಿಮಾನ ನಾಡಪ್ರೇಮ ಸ್ಫುರಿಸುವ ನಿಟ್ಟಿನಲ್ಲಿ ಈ ಗೀತಗಾಯನ ಪ್ರಮುಖ ಪಾತ್ರವಹಿಸಲಿದೆ. ಅಂತೇ ಶಿವಮೊಗ್ಗದಲ್ಲಿ ಗಮನ ಸೆಳೆದ ವಿಶೇಷ ಗೀತ ಗಾಯನ..

ಕರ್ನಾಟಕ ರಾಜೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ ವಿಶೇಷ ಗೀತ ಗಾಯನ ಕಾರ್ಯಕ್ರಮವು ನಾಗರೀಕರ ಗಮನ ಸೆಳೆಯಿತು.
ನೂರಾರು ಜನರು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ‘ಬಾರಿಸು ಕನ್ನಡ ಡಿಂಡಿಮ’, ‘ಜೋಗದ ಸಿರಿ ಬೆಳಕಿನಲಿ’ ಹಾಗೂ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಗೀತೆಗಳನ್ನು ಹಾಡಿದರು. ಅರುಣ್ ಕುಮಾರ್ ನೇತೃತ್ವದ ತಂಡ ಗೀತಾ ಗಾಯನ ನಡೆಸಿಕೊಟ್ಟಿತು.

ಈ ಸಂದರ್ಭದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಸೇರಿದಂತೆ ಅಧಿಕಾರಿಗಳು, ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...