Tuesday, May 5, 2026
Tuesday, May 5, 2026

ರಾಜ್ಯದ ಸಾರಿಗೆ ಸೇವೆ : ನಂ.1ರಿಂದ ಆನ್ ಲೈನ್ ಆಗಲಿದೆ

Date:

ಕರ್ನಾಟಕ ಆಡಳಿತ ಸುಧಾರಣಾ ಆಯೋಗ -2ರ ಶಿಫಾರಸು ಹಾಗೂ ಕೇಂದ್ರ ಸರ್ಕಾರದ ನಿರ್ದೇಶನ ನಿಯಮಾವಳಿಗಳನ್ವಯ ಆಯ್ದ 30 ಪ್ರಮುಖ ಸೇವೆಗಳನ್ನು ಆನ್ ಲೈನ್ ನಲ್ಲೇ ಜನರಿಗೆ ಒದಗಿಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಎನ್ಐಸಿ ಸಹಯೋಗದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಸದ್ಯದಲ್ಲೇ ಅಂತಿಮ ರೂಪ ಪಡೆಯಲಿದ್ದು, ಭ್ರಷ್ಟಾಚಾರ ಮುಕ್ತ ಸೇವೆ ಸಿಗುವ ನಿರೀಕ್ಷೆ ಮೂಡಿಸಿದೆ.
ಸಾರಿಗೆ ಇಲಾಖೆ ಸೇವೆಯನ್ನು ಸಾಧ್ಯವಾದಷ್ಟು ಸುಲಭ, ಸರಳ ಹಾಗೂ ಭ್ರಷ್ಟಾಚಾರ ಮುಕ್ತವಾಗಿ ಒದಗಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನ ನಡೆಸಲಾಗುತ್ತಿದೆ. “
ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಆಯ್ದ 30 ಸೇವೆಗಳನ್ನು ಆನ್ ಲೈನ್ ಮೂಲಕ ಒದಗಿಸಲು ಪ್ರಯತ್ನ ನಡೆದಿದೆ “ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಾರಿಗೆ ಇಲಾಖೆಯು 47 ಬಗೆಯ ಸೇವೆ ಒದಗಿಸುತ್ತಿದೆ. ಸಾರಿಗೆ ಇಲಾಖೆ ಸೇವೆಗಾಗಿ ವರ್ಷವಿಡಿ 50 ಲಕ್ಷಕ್ಕೂ ಹೆಚ್ಚು ಜನ ಕಚೇರಿಗೆ ಭೇಟಿ ನೀಡುತ್ತಾರೆ ಎಂಬ ಅಂದಾಜು ಇದೆ. ಇಷ್ಟು ಜನರ ಸಮಯ, ಸಂಚಾರ, ವೆಚ್ಚಕ್ಕೆ ತಡೆ ಹಾಕಿ ಆಯ್ದ ಸೇವೆಗಳನ್ನು ಕುಳಿತಲ್ಲೇ ಪಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ.
ವಾಹನದ ನೋಂದಣಿ ಪ್ರಮಾಣ ಪತ್ರದ (ಆರ್.ಸಿ) ಜೊತೆಗೆ ನೊಂದಣಿ ಸಂಖ್ಯೆ ಹಂಚಿಕೆ, ತಾತ್ಕಾಲಿಕ ನೊಂದಣಿ, ವಾಹನಗಳ ವರ್ಗಾವಣೆ, ಆರ್. ಸಿ ನಕಲು ಪ್ರತಿ, ಪ್ರಮಾಣಪತ್ರದಲ್ಲಿ ಬದಲಾವಣೆ, ಕಲಿಕೆ ಚಾಲನಾ ಪರವಾನಗಿ (ಎಲ್.ಎಲ್.) ವಿತರಣೆ, ಎಲ್.ಎಲ್.ನಲ್ಲಿ ಹೆಸರು ಅಥವಾ ವಿಳಾಸ ಬದಲಾವಣೆ, ಕಂಡಕ್ಟರ್ ಪರವಾನಗಿ /ನವೀಕರಣ ಸೇರಿದಂತೆ 5:30 ಸೇವೆಗಳು ನವೆಂಬರ್ ಒಂದರಿಂದ ಆನ್ ಲೈನ್ ನಲ್ಲಿ ಲಭ್ಯವಾಗಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...