Wednesday, October 2, 2024
Wednesday, October 2, 2024

ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅನುಮತಿ

Date:

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಆಚರಣೆ ಸಂಬಂಧ, ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿಯ ವೇಳೆ ಹಸಿರು ಪಟಾಕಿ ಗೆ ಮಾತ್ರ ಅವಕಾಶವಿದ್ದು, ಉಳಿದ ಇತರೆ ಸಿಡಿಮದ್ದುಗಳ ಮಾರಾಟಕ್ಕೆ ಅವಕಾಶವಿಲ್ಲ. ಹಸಿರು ಪಟಾಕಿಯ ಮಾರಾಟಕ್ಕೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಧಿಕೃತ ಪರವನಾಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಲು ಅವಕಾಶ ಇದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪಟಾಕಿಗಳನ್ನು ಸಾರ್ವಜನಿಕ ವಸತಿ ಸ್ಥಳದಿಂದ ದೂರವಿರುವ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಬೇಕು. ಮಳೆಗೆ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುತ್ತಿರಬೇಕು. ಒಂದು ಮಾರಾಟ ಮಳಿಗೆಗೂ ಹಾಗೂ ಇನ್ನೊಂದು ಮಾರಾಟ ಮಳಿಗೆಗೂ 6 ಮೀಟರ್ ಅಂತರವಿರಬೇಕು. ಮಾರಾಟ ಮಳಿಗೆಗೆ ನಿತ್ಯವೂ ಸ್ಯಾನಿಟೈಸ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಯ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಹಸಿರು ಪಟಾಕಿ ಪರಿಸರ ಸ್ನೇಹಿ ಪಟಾಕಿಯಾಗಿದೆ. ಇದರಿಂದ ಶಬ್ದ ಮಾಲಿನ್ಯ ವಾಯು ಮಾಲಿನ್ಯ ಯಾವುದೇ ಪರಿಸರಕ್ಕೆ ಹಾನಿಯಾಗದ ಇರುವ ಕಾರಣದಿಂದ ಈ ಪಟಾಕಿ ಅತ್ಯಂತ ಸುರಕ್ಷಿತ ಮತ್ತು ಪರಿಸರಸ್ನೇಹಿ ಪಟಾಕಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...