Monday, August 17, 2026
Monday, August 17, 2026

ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅನುಮತಿ

Date:

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಆಚರಣೆ ಸಂಬಂಧ, ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿಯ ವೇಳೆ ಹಸಿರು ಪಟಾಕಿ ಗೆ ಮಾತ್ರ ಅವಕಾಶವಿದ್ದು, ಉಳಿದ ಇತರೆ ಸಿಡಿಮದ್ದುಗಳ ಮಾರಾಟಕ್ಕೆ ಅವಕಾಶವಿಲ್ಲ. ಹಸಿರು ಪಟಾಕಿಯ ಮಾರಾಟಕ್ಕೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಧಿಕೃತ ಪರವನಾಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಲು ಅವಕಾಶ ಇದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪಟಾಕಿಗಳನ್ನು ಸಾರ್ವಜನಿಕ ವಸತಿ ಸ್ಥಳದಿಂದ ದೂರವಿರುವ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಬೇಕು. ಮಳೆಗೆ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುತ್ತಿರಬೇಕು. ಒಂದು ಮಾರಾಟ ಮಳಿಗೆಗೂ ಹಾಗೂ ಇನ್ನೊಂದು ಮಾರಾಟ ಮಳಿಗೆಗೂ 6 ಮೀಟರ್ ಅಂತರವಿರಬೇಕು. ಮಾರಾಟ ಮಳಿಗೆಗೆ ನಿತ್ಯವೂ ಸ್ಯಾನಿಟೈಸ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಯ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಹಸಿರು ಪಟಾಕಿ ಪರಿಸರ ಸ್ನೇಹಿ ಪಟಾಕಿಯಾಗಿದೆ. ಇದರಿಂದ ಶಬ್ದ ಮಾಲಿನ್ಯ ವಾಯು ಮಾಲಿನ್ಯ ಯಾವುದೇ ಪರಿಸರಕ್ಕೆ ಹಾನಿಯಾಗದ ಇರುವ ಕಾರಣದಿಂದ ಈ ಪಟಾಕಿ ಅತ್ಯಂತ ಸುರಕ್ಷಿತ ಮತ್ತು ಪರಿಸರಸ್ನೇಹಿ ಪಟಾಕಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...