Monday, February 2, 2026
Monday, February 2, 2026

ಕೊನೆಗೂ ಧಕ್ಕಿದ ಪರಿಹಾರ : ಕಾರ್ಮಿಕರ ನಿಟ್ಟುಸಿರು

Date:

ತುಂಗಭದ್ರಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ 26 ವರ್ಷ ನಂತರ ಬಾಕಿ ಪರಿಹಾರ ವಿತರಿಸಲಾಯಿತು. ಪರಿಹಾರಕ್ಕಾಗಿ ಹತ್ತಾರು ವರ್ಷದಿಂದ ಕಾದಿದ್ದ ಕಾರ್ಮಿಕರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.
ಪರಿಹಾರ ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಲ್‌ಸಿ ಆಯನೂರು ಮಂಜುನಾಥ್ ಅವರು ಮಾತನಾಡಿ, 26ವರ್ಷ ನಂತರ ಕಾರ್ಮಿಕರ ಹೋರಾಟಕ್ಕೆ ಜಯಸಿಕ್ಕಿದೆ. ಇದಕ್ಕಾಗಿ ಶ್ರಮಿಸಿದ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆ, ಕಾರ್ಮಿಕ ಮಂಡಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಾರ್ಮಿಕ ಇಲಾಖೆ ಆಯುಕ್ತ ನಾಗರಾಜ್ ಮಾತನಾಡಿ, ಪರಿಹಾರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದೇನೆ. 26 ವರ್ಷ ನಂತರ ಪರಿಹಾರ ಮಂಜುರಾಗಿರುವುದು ಸಂತಸ ತಂದಿದೆ ಎಂದರು.

ಕಾರ್ಖಾನೆ ಮಾಲೀಕ ಮಣಿವೇಲನ್, ನಿರ್ದೇಶಕರಾದ ಸುರೇಶ್, ರವಿಚಂದ್ರನ್, ಮಂಗಳೂರು ವಲಯದ ಕಾರ್ಮಿಕ ಆಯುಕ್ತ ಶಿವಕುಮಾರ್ ಇತರರು ಹಾಜರಿದ್ದರು.

ಮೊದಲ ದಿನವೇ ಸುಮಾರು 500 ಮಂದಿಗೆ ಪರಿಹಾರ ಚೆಕ್ ವಿತರಿಸಲಾಯಿತು. ಒಟ್ಟು 926 ಮಂದಿಗೆ 19 ಕೋಟಿ ಪರಿಹಾರ ವಿತರಿಸಬೇಕಿದ್ದು ವಿತರಣೆ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...