Sunday, May 25, 2025
Sunday, May 25, 2025

ಇಂಗ್ಲೆಂಡ್ ವಿರುದ್ಧ ನೆಲಕಚ್ಚಿದ ಶ್ರೀಲಂಕಾ

Date:

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಿತು. ಶ್ರೀಲಂಕಾ ತಂಡದ ವಿರುದ್ಧ ಇಂಗ್ಲೆಂಡ್ ರೋಚಕ ಜಯಗಳಿಸಿದೆ.

ಶಾರ್ಜಾದ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್ ಕಲೆಹಾಕಿತು. ಆರಂಭಿಕ ಹಿನ್ನಡೆ ಕಂಡು ರೋಚಕ ಬ್ಯಾಟಿಂಗ್ ಮಾಡಿದ ಜೋಸ್ ಬಟ್ಲರ್ ಮತ್ತು ಇಯಾನ್ ಮಾರ್ಗನ್ ರವರ ಉತ್ತಮ ಪ್ರದರ್ಶನದೊಂದಿಗೆ ತಂಡದ ಗೆಲುವಿಗೆ ಆಸರೆಯಾದರು.

ಜೋಸ್ ಬಟ್ಲರ್ ರವರು 67 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಿಡಿಸಿ 101 ರನ್ ಗಳಿಸುವ ಮೂಲಕ ಸೆಂಚುರಿ ಬಾರಿಸಿದರು. ಹಾಗೆಯೇ ಇಯಾನ್ ಮಾರ್ಗನ್ ರವರು 36 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಗಳನ್ನು ಸಿಡಿಸಿ 40 ರನ್ ಗಳನ್ನೂ ಕಲೆ ಹಾಕಿದರು.

5.2 ಓವರ್ ಗಳಲ್ಲಿ ಕೇವಲ 35 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡದ ಸ್ಥಿತಿ ರಕ್ಷಣಾತ್ಮಕ ಆಟದೊಂದಿಗೆ ಇನ್ನಿಂಗ್ಸ್ ಕಟ್ಟಿದ ಈ ಜೋಡಿ ಕ್ರಮೇಣ ಅಬ್ಬರಿಸತೊಡಗಿ 4 ನೇ ವಿಕೆಟ್ ಗೆ ಕೇವಲ 78 ಎಸೆತಗಳಲ್ಲಿ 112 ರನ್ ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ತಂಡ ಕೊನೆಯ 10 ಓವರ್ ಗಳಲ್ಲಿ 1 ವಿಕೆಟ್ ಗೆ 116 ರನ್ ಗಳಿಸಿತು. ಅದರಲ್ಲೂ ಇನ್ನಿಂಗ್ಸ್ ನ ಕೊನೆಯ ಓವರ್ ನ (19.5) ಕೊನೆಯ ಬಾಲ್ ನಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಬಟ್ಲರ್ ಆಕರ್ಷಕ ಶತಕ ಪೂರೈಸಿದರು. ಇದರೊಂದಿಗೆ ಟಿ – 20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ 8 ನೇ ಹಾಗೂ ಋತುವಿನ ಮೊದಲ ಆಟಗಾರ ಎಂಬ ಗೌರವಕ್ಕೆ ಬಟ್ಲರ್ ಪಾತ್ರರಾದರು.

ಒಟ್ಟಿನಲ್ಲಿ ಇವರಿಬ್ಬರ ಉತ್ತಮ ಪ್ರದರ್ಶನ ಮೂಲಕ ಬಹಳ ತಾಳ್ಮೆಯಿಂದ ಸಮಯೋಚಿತ ಬ್ಯಾಟಿಂಗ್ ಫಲವಾಗಿ ಇಂಗ್ಲೆಂಡ್ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ 12 ರ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ 164 ರನ್ ಗಳ ಸವಾಲ್ ಹಾಕಿತು.
163 ರನ್ ಗಳನ್ನ ಗೆಲುವಿನ ಗುರಿ ಬೆನ್ನತ್ತಿ ಹೋರಾಡುವ ಹೊತ್ತಿಗೆ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು. ತಂಡದ ಪ್ರಮುಖ ಬ್ಯಾಟ್ಸ್ಮನ್ ಗಳು ಬಹಳ ಬೇಗನೆ ವಿಕೆಟ್ ಗಳನ್ನ ಒಪ್ಪಿಸಿ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ 19 ಓವರ್ ಗಳಲ್ಲಿ 137 ರನ್ ಗಳಿಸಿತು.ತಲಾ 2 ವಿಕೆಟ್ ಗಳಿಸಿದ ಇಂಗ್ಲೆಂಡ್ ತಂಡದ ಮೋಯಿನ್ ಅಲಿ, ಆದಿಲ್ ರಶೀದ್ ಮತ್ತು ಕ್ರಿಸ್ ಜೋರ್ಡಾನ್ ಅವರು ಶ್ರೀಲಂಕಾದ ಕುಸಿತಕ್ಕೆ ಕಾರಣರಾದರು. ಇಂಗ್ಲೆಂಡ್ ತಂಡಕ್ಕೆ ಶರಣಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ "ಆತಿಥ್ಯರತ್ನ"ವನ್ನು...

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ...