Friday, April 3, 2026
Friday, April 3, 2026

ಕೈ ಸುಡುವಂತಿದೆ ಹಸಿರು ಪಟಾಕಿ ಬೆಲೆ

Date:

ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಪ್ರಾರಂಭವಾಗಿದೆ. ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸುಪ್ರೀಂ ಕೋರ್ಟ್ ಹಸಿರು ಪಟಾಕಿ ಬಳಸಲು ಅನುಮತಿ ನೀಡಿದೆ. ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಈ ಅನುಮತಿಯ ಹಿನ್ನೆಲೆಯಲ್ಲಿದೆ. ಯಾವುದೇ ಜನಾಂಗದ ವಿರುದ್ಧವು ಕೂಡ ಈ ಸೂಚನೆ ಹೊರಡಿಸಿಲ್ಲ. ಇಡೀ ಸಮುದಾಯದ ಕ್ಷೇಮ ನ್ಯಾಯಾಂಗದ ಹೊಣೆ ಎಂದು ಸ್ಪಷ್ಟೀಕರಿಸಿದೆ.

ದೀಪಾವಳಿ ಹಬ್ಬದಲ್ಲಿ ಮಕ್ಕಳಿಂದ ಹಿಡಿದು ಹಿರಿಯರು ಸೇರಿ ಪಟಾಕಿ ಸಿಡಿಸುವುದು ವಾಡಿಕೆಯಾಗಿದೆ. ಆದರೆ ಹಸಿರು ಪಟಾಕಿ ಗ್ರಾಹಕರ ಕೈಗೆ ನಿಲುಕಲಾರದಷ್ಟು ದುಬಾರಿಯಾಗಿದೆ. ಸಾಗಾಣಿಕೆ ವೆಚ್ಚ, ರಾಸಾಯನಿಕ ಕಚ್ಚಾ ಪದಾರ್ಥಗಳ ಬೆಲೆ ಏರಿಕೆಯಿಂದ ಈ ಬಾರಿ ಹಸಿರು ಪಟಾಕಿ ಬೆಲೆ ಶೇ.30 ರಷ್ಟು ಏರಿಕೆಯಾಗಿದೆ.

ದೇಶದಲ್ಲಿ ಪಟಾಕಿ ತಯಾರಿಕೆಗೆ ತಮಿಳುನಾಡಿನ ಶಿವಕಾಶಿಯು ಹೆಸರುವಾಸಿಯಾಗಿದೆ. ಇಲ್ಲಿಂದ ರಾಜ್ಯದ ಬೆಂಗಳೂರು ಮೈಸೂರು ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ಡೀಲರ್ ಗಳ ಮೂಲಕ ಪಟಾಕಿ ಹಂಚಿಕೆಯಾಗುತ್ತದೆ. ಹೋಲ್ಸೇಲ್ ದರದಲ್ಲಿ ಸಿಗುವ ಪಟಾಕಿಗಳ ಸಾಗಾಣಿಕೆ ವೆಚ್ಚ ಹೊರೆಯಾಗಿದ್ದು, ಶೇ. 8.5 ರಷ್ಟು ಶೇ. 12 ರಷ್ಟು ಬೆಲೆ ಏರಿಕೆ ಮಾಡಿದ್ದಾರೆ.

ಸಾಮಾನ್ಯ ಹೂಕುಂಡದ ಪಟಾಕಿ ಬಾಕ್ಸ್ ಗೆ 100-200 ರೂಪಾಯಿ, ಹಸಿರು ಪಟಾಕಿ ಹೂಕುಂಡದ ಬಾಕ್ಸ್ ಗೆ 500-550 ರೂಪಾಯಿ ಹೆಚ್ಚಳವಾಗಿದೆ. ಸಾಮಾನ್ಯ ಪಟಾಕಿ ಬಾಕ್ಸ್ 20-100 ರೂಪಾಯಿ, ಹಸಿರು ಪಟಾಕಿ ಬಾಕ್ಸ್ 200-400 ರೂಪಾಯಿ ಏರಿಕೆಯಾಗಿದೆ. ಸಾಮಾನ್ಯ ಭೂ ಚಕ್ರದ ಬಾಕ್ಸ್ 50-100 ರೂಪಾಯಿ, ಹಸಿರು ಪಟಾಕಿಯ ಭೂ ಚಕ್ರದ ಬಾಕ್ಸ್ 120-250 ರೂಪಾಯಿಗಳಷ್ಟು ಹೆಚ್ಚಳವಾಗಿದೆ ಮತ್ತು ಸಾಮಾನ್ಯ ಆಟಂ ಬಾಂಬ್ 100-110 ರೂಪಾಯಿ ಏರಿಕೆಯಾದರೆ, ಹಸಿರು ಪಟಾಕಿಯ ಆಟಂ ಬಾಂಬ್ 120-150 ರೂಪಾಯಿಗಳಷ್ಟು ದುಬಾರಿಯಾಗಿದೆ.

ಈ ಬಾರಿಯ ದೀಪಾವಳಿ ಹಬ್ಬದ ಪಟಾಕಿ ದರ ಸಾಮಾನ್ಯ ವರ್ಗದವರ ಮೇಲೆ ಹೊರೆಯಾಗಿ ಪರಿಣಮಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದರೆ ಉತ್ತಮ ಆರೋಗ್ಯ ಜೀವನ-ಜಿ.ಎ. ಮಂಜುನಾಥ್.

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ...