Monday, December 8, 2025
Monday, December 8, 2025

ಪೆಟ್ರೋಲ್ – ಡಿಸೆಲ್ ದರ ಕಡಿತ

Date:

ಶತಕದ ಗಡಿ ದಾಟಿದ ಪೆಟ್ರೋಲ್ ಡೀಸೆಲ್ ದರದಿಂದ ಬೇಸರಗೊಂಡಿದ್ದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ರೂ.10 ಹಾಗೂ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂಪಾಯಿಗೆ ಕಡತಗೊಳಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂಪಾಯಿಯವರೆಗೆ ಕಡತ ಗೊಳಿಸಿದೆ.
ಕೇಂದ್ರ ಸರಕಾರ ಡಿಸೇಲ್ ಮೇಲೆ 10 ರೂಪಾಯಿ ಹಾಗೂ ಪೆಟ್ರೋಲ್ ಮೇಲೆ ಐದು ರೂಪಾಯಿ ಕಡಿಮೆಗೊಳಿಸಿದ್ದು, ಸ್ವಾಗತಾರ್ಹ. ಕರ್ನಾಟಕ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲೆ ಹೇಳಿ ರೂಪಾಯಿ ಕಡಿಮೆಗೊಳಿಸಲು ನಿರ್ಧರಿಸಿದೆ. ಇದರಿಂದಾಗಿ ಸರ್ಕಾರಕ್ಕೆ 2,100 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ದೇಶದ ರೈತರು ತಮ್ಮ ಶ್ರಮದ ಮೂಲಕ ಆರ್ಥಿಕ ಪ್ರಗತಿಯ ಗತಿಯನ್ನು ಕಾಪಾಡಿಕೊಂಡಿದ್ದರು. ಡೀಸೆಲ್ ಮೇಲಿನ ಎಕ್ಸೈಟ್ ಸುಂಕವನ್ನು ಭಾರಿ ಪ್ರಮಾಣದಲ್ಲಿ ತಗ್ಗಿಸಿರುವುದು ಮುಂಬರುವ ಬಿತ್ತನೆ ಸಮಯದಲ್ಲಿ ಅವರಿಗೆ ಉತ್ತೇಜನ ನೀಡಲಿದೆ ಎಂದು ಕೇಂದ್ರವು ಹೇಳಿದೆ.
ಎಕ್ಸೈಸ್ ಸುಂಕ ಇಳಿಕೆ ತೀರ್ಮಾನವು ಹಬ್ಬದ ಸಂದರ್ಭದಲ್ಲಿ ಬೇಡಿಕೆ ಹೆಚ್ಚಿಸಲು ನೆರವಾಗಲಿದೆ. ಹಣದುಬ್ಬರದ ಒತ್ತಡವನ್ನು ತಗ್ಗಿಸಲಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಜನರ ಓಡಾಟ ಹೆಚ್ಚಲಿದ್ದು, ಇದು ಕೇಂದ್ರದ ವರಮಾನ ನಷ್ಟದ ಪ್ರಮಾಣವನ್ನು ತಗ್ಗಿಸಲಿದೆ ಎಂದು ಐಸಿಆರ್ ಎ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆ ಅಧಿತಿ ನಾಯರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...