Sunday, August 23, 2026
Sunday, August 23, 2026

ಕ್ರಿಕೆಟ್ ತಡೆ ಗೋಡೆ ಈಗ ಮುಖ್ಯ ಕೋಚ್

Date:

ಭಾರತ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಇದೇ ತಿಂಗಳು ಭಾರತದಲ್ಲಿಯೇ
ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾರ್ಯರಂಭ ಮಾಡಲಿದ್ದಾರೆ.
ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಗಮನ ಹರಿಸುತ್ತೇನೆ. ಎಂದು ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ದುಬೈನಲ್ಲಿ ಹೋದ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ನಡೆಯುವ ಸಂದರ್ಭದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ದ್ರಾವಿಡ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದರು. ಕೋಚ್ ಹುದ್ದೆ ಸ್ವೀಕರಿಸಲು ದ್ರಾವಿಡ್ ಅವರನ್ನು ಮನವೊಲಿಸಿದರು.
2023ರ ಏಕದಿನ ವಿಶ್ವಕಪ್ ಟೂರ್ನಿಯ ವರೆಗೂ ಅವರು ಕೆಲಸ ಮಾಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ರೀಮತಿ ಸುಲಕ್ಷಣ ನಾಯ್ಕ, ಶ್ರೀ ಆರ್ ಪಿ ಸಿಂಗ್, ಅವರನ್ನ ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು ಅವಿರೋಧವಾಗಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ತರಬೇತುದಾರರನ್ನಾಗಿ ಆಯ್ಕೆ ಮಾಡಿದೆ.
ಅವರಿಗೆ ನೀಡುವ ವಾರ್ಷಿಕ ಸಂಭಾವನೆ 10 ಕೋಟಿ ರೂಪಾಯಿಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...