ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬತ್ತಿ ಗ್ರಾಮದ ದಟ್ಟ ಕಾಡಿನಲ್ಲಿ ಗಣಿಗಾರಿಕೆ ನಡೆಯಬಾರದು. ಉದ್ದೇಶಿತ ಕಲ್ಲುಗಣಿಗಾರಿಕೆ ತಡೆಹಿಡಿದು ಅದರ ಪರವಾನಗಿ ರದ್ದುಪಡಿಸಬೇಕು ಎಂದು ಜನಸಂಗ್ರಾಮ ಪರಿಷತ್ತಿನ ಸಂಸ್ಥಾಪಕ ಎಸ್.ಆರ್. ಹಿರೇಮಠ್ ಹೇಳಿದ್ದಾರೆ.
ಹೊಸನಗರ ತಾಲೂಕಿನ ಕುಂಬತ್ತಿ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ಎಸ್.ಆರ್.ಹಿರೇಮಠ್ ಅವರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಅರಣ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆ ಕಲ್ಲುಗಣಿಗಾರಿಕೆಯ ಕ್ರಮದಲ್ಲಿ ಶಾಮೀಲಾಗಿದೆ. ಇಲಾಖಾಧಿಕಾರಿಗಳ ನಿರ್ಲಕ್ಷದಿಂದ ಕುಂಬತ್ತಿ ಗ್ರಾಮದ ಅರಣ್ಯದಲ್ಲಿ ಅಕ್ರಮ ನಾಂದಿ ಹಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜನಸಂಗ್ರಾಮ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಅಖಿಲೇಶ್ ಚಿಪ್ಳಿ, ಜಿಲ್ಲಾ ಕಾರ್ಯದರ್ಶಿ ಗಿರೀಶ ಆಚಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ಜೈರಾಮ್ ಕಾರ್ಗಡಿ ಉಪಸ್ಥಿತರಿದ್ದರು.
ಹೊಸನಗರ : ಕುಂಬತ್ತಿ ಕಲ್ಲುಗಣಿಗಾರಿಕೆ ಬೇಡ
Date: