Sunday, December 14, 2025
Sunday, December 14, 2025

ಈಗಲೇ ಎಲ್ ಕೆಜಿ ಪ್ರವೇಶ: ಅನುಮತಿ ಇಲ್ಲ.

Date:

ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಮಾರ್ಗಸೂಚಿ ಹೊರಡಿಸಿದೆ. ಕೋವಿಡ್ -19 ನಿಂದಾಗಿ ಕಳೆದ ಒಂದುವರೆ ವರ್ಷದಿಂದ ಮಕ್ಕಳು ಶಾಲೆಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಹಂತ-ಹಂತವಾಗಿ ಶಾಲೆಗಳ ತರಗತಿಯನ್ನು ಪ್ರಾರಂಭಿಸುತ್ತಿದೆ ಈಗ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದೆ. ಹೀಗಾಗಿ ಎಲ್ ಕೆಜಿ ಮತ್ತು ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರದ ಬಳಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಮಾಂಟೆಸ್ಸರಿಗಳು ಒತ್ತಾಯಿಸಿವೆ.

ಕೋವಿಡ್ -19 ನಿಂದ ಅಂಗನವಾಡಿ ಕೇಂದ್ರಗಳು ಫಲಾನುಭವಿಗಳ ಮನೆ ಬಾಗಿಲಿಗೆ ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಲಾಗುತ್ತಿತ್ತು. ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾದರಿಂದ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಆರಂಭಗೊಳಿಸಲಿದೆ.

ರಾಜ್ಯದಲ್ಲಿ ಈಗಾಗಲೇ 1ರಿಂದ 10 ತರಗತಿಯ ಆರಂಭಗೊಂಡಿವೆ. ” ಮಕ್ಕಳು ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮಾತೃಭಾಷೆಯಲ್ಲಿ ಅಕ್ಷರಭ್ಯಾಸ, ಭಾಷಾ ಕಲಿಕೆ, ಬಣ್ಣ, ವಸ್ತುಗಳ ಆಕಾರ ಗುರುತಿಸುವುದು, ಸಂಖ್ಯೆಗಳಲ್ಲಿ ಪರಿಣಿತಿ ಹೊಂದಿದ ಬಳಿಕವಷ್ಟೇ ಪ್ರಾರ್ಥಮಿಕ ತರಗತಿಗಳಲ್ಲಿ ಉತ್ತಮವಾಗಿ ಕಲಿಯಲು ಸಾಧ್ಯ. ಪ್ರತಿವರ್ಷ ಸುಮಾರು 25 ಲಕ್ಷಕ್ಕೂ ಹೆಚ್ಚು ಮಕ್ಕಳು ಎಲ್ ಕೆಜಿ ತರಗತಿಗಳಿಗೆ ಸೇರುತ್ತಿದ್ದರು. ಆದರೆ ಲಾಕ್ಡೌನ್ ನಿಂದ ಶಾಲೆಗಳು ಮುಚ್ಚಿದ್ದ ಪರಿಣಾಮ ಪೂರ್ವ ಪ್ರಾರ್ಥಮಿಕ ಶಾಲೆಗಳಿಗೆ ಸಮರ್ಪಕವಾಗಿ ದಾಖಲಾತಿ ನಡೆದಿಲ್ಲ. ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ ಮಕ್ಕಳ ವಯಸ್ಸು ಒಂದೇ ಆಗಿದೆ. ಆದ್ದರಿಂದ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳ ಆರಂಭಕ್ಕೆ ಅನುಮತಿ ನೀಡಿ” ಎಂದು ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...