Thursday, June 25, 2026
Thursday, June 25, 2026

ಪುನೀತ್ ಗೆ, ಪ್ರತಿಷ್ಠಿತ ಬಸವಶ್ರೀ

Date:

ಕನ್ನಡ ಚಿತ್ರರಂಗದ ಪ್ರಖ್ಯಾತ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಪ್ರತಿಷ್ಠಿತ 2021 ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಮುರುಘಾ ಶರಣರು ಮಾತನಾಡಿ ಪುನೀತ್ ಅವರು ಬಾಲನಟನಾಗಿ, ನಾಯಕನಾಗಿ, ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಅಲ್ಲದೆ ರಾಜ್ಯ ಸರ್ಕಾರದ ನಾನಾ ಯೋಜನೆಗಳ ರಾಯಭಾರಿಯಾಗಿ, ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿ ಸಮಾಜದಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೆಸರಾಂತ ನಟ ಹೃದಯಾಘಾತದಿಂದ ಕಳೆದವಾರ ನಮ್ಮನ್ನು ಆಗಲಿರುವುದು ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟುಮಾಡಿದೆ. ಅವರ ಕುಟುಂಬದವರು ನೋವನ್ನು ಸಹಿಸಿಕೊಳ್ಳಲು ಬಸವಾದಿ ಪ್ರಮಥರ ಆಶೀರ್ವಾದ ಸದಾ ಇರಲಿ.

ಮಾನವೀಯ ಮೌಲ್ಯಗಳನ್ನೊಳಳಗೊಂಡಿದ್ದ ಪುನೀತ್ ಅವರ ಸಾಧನೆ ದೊಡ್ಡದು. ಚಿಕ್ಕವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿ ಹೋಗಿದ್ದಾರೆ ಎಂದರು. ಹೀಗಾಗಿ ಮರಣೋತ್ತರವಾಗಿ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...