Wednesday, October 2, 2024
Wednesday, October 2, 2024

ಎಂಪಿಎಂ ಕಾರ್ಮಿಕರ ರಕ್ಷಣೆಗೆ ಸಂಸದರ ಯತ್ನ

Date:

ಭದ್ರಾವತಿಗೆ ಉಕ್ಕು ಮತ್ತು ಕಾಗದ ಕಾರ್ಖಾನೆಗಳು ಅರಿಶಿನ ಕುಂಕುಮಗಳೆನಿಸಿದ್ದವು.
ಆದರೆ ಕಾಗದ ಕಾರ್ಖಾನೆ ಬೀಗಜಡಿದು ಕಾರ್ಮಿಕರ ಬಾಳು ಈಗ ಮೂರಾಬಟ್ಟೆಯಾಗಿದೆ. ಎಂಪಿಎಂ ಎಂದೇ ಖ್ಯಾತಿ ಪಡೆದ ಕಾಗದ ಕಾರ್ಖಾನೆಯ ಮರು ಆರಂಭಕ್ಕೆ ಸದ್ಯ ಸಂಸದ ಬಿ. ವೈ. ರಾಘವೇಂದ್ರ ಪ್ರಯತ್ನಶೀಲರಾಗಿದ್ದಾರೆ.
ಕಾರ್ಖಾನೆಯ 209 ಮಂದಿ ನೌಕರರಲ್ಲಿ 129 ಮಂದಿ ವಿವಿಧ ನಿಗಮ ಮಂಡಳಿಯ 19 ಕಡೆಯಲ್ಲಿ ಎರವಲು ಸೇವೆ ಮೇಲೆ ಕೆಲಸ ಮಾಡುತ್ತಿದ್ದಾರೆ.
7 ಮಂದಿ ಎಂಪಿಎಂ ಫಾರೆಸ್ಟ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. 52 ಮಂದಿ ಎಂಪಿಎಂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಉಳಿದ 21 ಮಂದಿ ಕಾರ್ಮಿಕರು ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿ ಸಂದರ್ಶನದಲ್ಲಿ ಭಾಗವಹಿಸಿ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
“ನಮ್ಮ ಮನವಿಗೆ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳು ಸ್ಪಂದಿಸಿದರು.ಇದರ ಪರಿಣಾಮ ಸೇವೆಯಲ್ಲಿದ್ದ ನೌಕರರಿಗೆ ಸಿದ್ಧಪಡಿಸಿದ ವಿಮುಕ್ತಿ ಪತ್ರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಖ್ಯಮಂತ್ರಿಗಳ ನೇತೃತ್ವದ ಸಭೆ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ” ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...