Sunday, December 7, 2025
Sunday, December 7, 2025

ದೇಶರಕ್ಷಕರೊಂದಿಗೆ ಪ್ರಧಾನಿ ದೀಪಾವಳಿ

Date:

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಗುರುವಾರ ಭಾರತೀಯ ಯೋಧರೊಂದಿಗೆ ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಯೋಧರಿಗೆ ಸಿಹಿ ತಿನ್ನಿಸಿ, ” ದೇಶ ಕಾಯುವ ಧೈರ್ಯವಂತರಾದ ತಾವೇ ನನ್ನ ಕುಟುಂಬ” ಇಂದು ಯೋಧರನ್ನು ಉದ್ದೇಶಿಸಿ ಭಾವುಕ ಭಾಷಣ ಮಾಡಿದರು.

ವಿಶ್ವದಾದ್ಯಂತ ಯುದ್ಧ ಮಾದರಿಗಳು ದಿನೇದಿನೇ ಬಾರಿ ಬದಲಾವಣೆ ಕಾಣುತ್ತೇವೆ. ಈ ನಿಟ್ಟಿನಲ್ಲಿ ಹೋರಾಟಕ್ಕಾಗಿ ಅಗತ್ಯವಾದ ಮಿಲಿಟರಿ ಸಾಮರ್ಥ್ಯವನ್ನು ಭಾರತ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಇದಕ್ಕೆ ತಕ್ಕಂತೆ ಗಡಿಯಲ್ಲಿ ಸಂಪರ್ಕ ಹೆಚ್ಚಳ ಹಾಗೂ ಸೇನೆ ನಿಯೋಜನೆಗೆ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗಿದೆ ಎಂದು ಮೋದಿಜಿಯವರು ಹೇಳಿದ್ದಾರೆ.

ಹಲವು ಸಾಮ್ರಾಜ್ಯಗಳು, ಕೌಟುಂಬಿಕ ಆಳ್ವಿಕೆಗಳು ಈ ನೆಲದಲ್ಲಿ ಬಂದುಹೋಗಿವೆ. ಕೇವಲ ಭೌಗೋಳಿಕ ಗಡಿಯನ್ನು ಕಾಯ್ದುಕೊಳ್ಳುವುದು ಮಾತ್ರವೇ ರಾಷ್ಟ್ರೀಯ ಭದ್ರತೆ ಅಲ್ಲ. ಭಾರತದಂತಹ ವಿಶಿಷ್ಟ ರಾಷ್ಟ್ರದ ವೈವಿದ್ಯತೆ, ಅಸ್ಮಿತೆ ಹಾಗೂ ಏಕತೆಯನ್ನು ಕಾಯ್ದುಕೊಳ್ಳುವುದು ಕೂಡ ರಾಷ್ಟ್ರೀಯ ಬದ್ಧತೆಯೇ ಆಗಿದೆ ಎಂದು ಯೋಧರನ್ನು ಉದ್ದೇಶಿಸಿ ಮೋದಿಜಿ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...