Monday, December 15, 2025
Monday, December 15, 2025

ಹಿಂದೂ ಧರ್ಮಕ್ಕೆ ಆದಿಶಂಕರರ ಕೊಡುಗೆ ಅಪಾರ : ಮೋದಿಜಿ

Date:

ನವೆಂಬರ್ 5 ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರು ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥ್ ಗೆ ಭೇಟಿ ನೀಡಿದರು. ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದರು. 2016ರಲ್ಲಿ ಬಂದ ಹಿಮ ಪ್ರವಾಹದ ಪರಿಣಾಮವಾಗಿ ಶಂಕರಾಚಾರ್ಯರ ಸಮಾಧಿ ಅಸ್ತವ್ಯಸ್ತವಾಗಿತ್ತು. ಮತ್ತೆ ಅದರ ಪುನರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಶ್ರೀ ಶಂಕರಾಚಾರ್ಯರ ಪ್ರತಿಮೆಯನ್ನ ಮೈಸೂರಿನ ಶಿಲ್ಪಿ ಅವರು ತಮ್ಮ ಕರಕುಶಲತೆಯಿಂದ ನಿರ್ಮಿಸಿದ್ದಾರೆ. 12 ಅಡಿ ಎತ್ತರ ಇರುವ ಶಂಕರಾಚಾರ್ಯರ ಮೂರ್ತಿಯನ್ನು ಬಹುಸುಂದರವಾಗಿ ನಿರ್ಮಿಸಲಾಗಿದೆ. ಅವರ ಶಿಲ್ಪ ಕಲಾ ನೈಪುಣ್ಯಕ್ಕೆ ಗೌರವಿಸಿ ಕೇಂದ್ರ ಸರ್ಕಾರ ಅವರನ್ನು ಪರೀಕ್ಷಾರ್ಥವಾಗಿ ಆಚಾರ್ಯರ ಮಾದರಿ ಮೂರ್ತಿಯನ್ನು ಕೆತ್ತನೆ ಮಾಡಲು ಕೇಳಲಾಗಿತ್ತು. ಮೋದಿ ಅವರೇ ಈ ಕೆತ್ತನೆಗೆ ಮನಸೋತು ಕೆಲಸ ಆರಂಭಿಸಲು ಸೂಚಿಸಿದರು. ಶಂಕರಾಚಾರ್ಯರ ಮೂರ್ತಿಯನ್ನು ಕೃಷ್ಣ ಶಿಲೆಯಲ್ಲಿ ನಿರ್ಮಿಸಲಾಗಿದೆ.

ಪ್ರಧಾನಿ ಮೋದಿ ಜಿ ಅವರು ಕೇದಾರೇಶ್ವರನಿಗೆ ಅರ್ಚನೆಯ ಮಾಡಿ ಪೂಜೆ ಸಲ್ಲಿಸಿದರು. ಕನ್ನಡಿಗ ಅರ್ಚಕರಾದ ಶ್ರೀ ವಾಗೀಶ ಲಿಂಗ ಅವರು ರುದ್ರಾಕ್ಷಿ ಹಾರವನ್ನು ಪ್ರಧಾನಿಯವರ ಕೊರಳಿಗೆ ತೊಡಿಸಿ ಸ್ವಾಗತಿಸಿದರು. ನಂತರ ಪ್ರಧಾನಿಯವರು ಕೇದಾರೇಶ್ವರನಿಗೆ ಆರತಿ ಬೆಳಗಿದರು. ಭಕ್ತಿಪರವಶರಾಗಿ ಆದಿಶಂಕರಾಚಾರ್ಯರ ಪ್ರತಿಮೆ ಮುಂದೆ ಧ್ಯಾನಸ್ಥರಾಗಿ ಕುಳಿತಿದ್ದರು. ತಮ್ಮ ಭಾಷಣದಲ್ಲಿ ಹಿಂದೂ ಧರ್ಮಕ್ಕೆ ಆದಿಶಂಕರರ ಕೊಡುಗೆ ಅಪಾರ ಎಂದು ಸ್ಮರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...