Monday, December 15, 2025
Monday, December 15, 2025

ಕುಚೇಷ್ಟೆಯ ಚೀನಾ ಕುತಂತ್ರಗಳು

Date:

ಅತಿಕ್ರಮಣ ಮನಸ್ಥಿತಿಯೊಂದಿಗೆ ಯಾವಾಗಲೂ ಬೇರೆ ದೇಶಗಳೊಂದಿಗೆ ಜಗಳವಾಡುವ ಚೀನಾ ಪರಮಾಣು ಅಸ್ತ್ರಗಳನ್ನು ಹೇರಳವಾಗಿ ಸಂಗ್ರಹಿಸುತ್ತಿದೆ.
2020ರಲ್ಲಿ ಪೂರ್ವ ಲಡಾಕ್ ನಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದರು. ಅತಿಕ್ರಮಣಕ್ಕೆ ಯತ್ನಿಸಿ, ವಿಫಲವಾಗಿದ್ದರು. ನಂತರ ಗಡಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಕಳೆದ ವರ್ಷ ಘರ್ಷಣೆ ವೇಳೆ ಪಶ್ಚಿಮ ಹಿಮಾಲಯ ಪ್ರಾಂತ್ಯದಲ್ಲಿನ ಗೋಪಿ ಸ್ಥಳಗಳಲ್ಲಿ ಚೀನಾ ಮಿಲಿಟರಿಯು ಫೈಬರ್ ಆಪ್ಟಿಕ್ ಜಾಲವನ್ನು ಅಳವಡಿಸಿತ್ತು ಎಂದು ಪೆಂಟಗಾನ್ ವರದಿ ಹೇಳಿದೆ.
ತನ್ನ ಸೈನಿಕರು ಶೀಘ್ರವಾಗಿ ಸಂವಹನ ನಡೆಸಲು ಉಪಯುಕ್ತವಾಗುವಂತೆ ಈ ಜಾಲವನ್ನು ಬಳಸಲಾಗಿತ್ತು ಎನ್ನಲಾಗಿದೆ. ಅಮೆರಿಕದ ಜೊತೆಗೆ ಉತ್ತಮ ಸ್ನೇಹ ಸಂಬಂಧ ಹೊಂದಿರುವುದರಿಂದ ಭಾರತದ ಬಗ್ಗೆ ಚೀನಾಗೆ ಅಸಮಾಧಾನ ಇದೆ. ಇದೇ ಕಾರಣ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ತರದ ಗಡಿ ತಂಟೆ ಗಳು ಉಂಟಾಗಬಹುದು ಎಂದು ಪೆಂಟಗಾನ್ ಎಚ್ಚರಿಸಿದೆ.
ಹೀಗೆ ಚೀನಾದ ಅಣ್ವಸ್ತ್ರ ಸಂಗ್ರಹ ಮುಂದುವರೆದಲ್ಲಿ 2030ರ ವೇಳೆಗೆ ಸಾವಿರ ಪರಮಾಣು ಸಿಡಿತಲೆಗಳನ್ನು ‘ಡ್ರ್ಯಾಗನ್’ ರಾಷ್ಟ್ರದ ಮಿಲಿಟರಿ ಹೊಂದಿರಲಿದೆ. ಇದು ಯಾವುದೇ ವಿದೇಶಿ ರಾಷ್ಟ್ರದ ಮೇಲೆ ಯುದ್ಧ ಸಾರಿ, ಕ್ಷಣಮಾತ್ರದಲ್ಲಿ ಅಣ್ವಸ್ತ್ರ ದಾಳಿ ನಡೆಸುವ ಅಪಾಯವನ್ನು ಸೂಚಿಸುತ್ತದೆ. ಅತಿಕ್ರಮಣ ಮನಸ್ಥಿತಿಯ ಚೀನಾ ಬಳಿ ಇಷ್ಟೊಂದು ಹಣ ವಸ್ತುಗಳು ಇರುವುದು ಜಗತ್ತಿಗೆ ಕಂಟಕ ಎಂದು ವರದಿ ಹೇಳಲಾಗಿದೆ.
ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಚೀನಾ ನೂತನ ಗ್ರಾಮವೊಂದನ್ನು ನಿರ್ಮಿಸಿದೆ ಎಂಬುದನ್ನು ಅಮೆರಿಕ ರಕ್ಷಣಾ ಇಲಾಖೆಯ ವರದಿ ಸಹ ಸ್ಪಷ್ಟಪಡಿಸಿದೆ.
ಇದಕ್ಕೂ ಮೊದಲು ಅರುಣಾಚಲ ಪ್ರದೇಶಗಳಲ್ಲಿ ನೂರು ಮನೆಗಳ ಗ್ರಾಮವನ್ನು ನಿರ್ಮಿಸುವ ಮೂಲಕ ಚೀನಾ ಉದ್ದಟತನ ಮೆರೆದಿದೆ ಇಂದು ಭಾರತದಲ್ಲಿ ವರದಿಯಾಗಿತ್ತು. ಈಗ ಇದನ್ನು ಅಮೆರಿಕ ರಕ್ಷಣಾ ಇಲಾಖೆಯು ಸಂಸತ್ತಿಗೆ ನೀಡಿರುವ ವರದಿಯಲ್ಲಿ ಉಲ್ಲೇಖಿಸಿದೆ. “ಡಿಬೇಟ ಪ್ರದೇಶ ಹಾಗೂ ಅರುಣಾಚಲಪ್ರದೇಶದ ಮಧ್ಯೆಯಿರುವ ವಿವಾದಿತ ಪ್ರದೇಶದಲ್ಲಿ ಚೀನಾ ಗ್ರಾಮ ನಿರ್ಮಿಸಿದೆ”ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...